ಜನ ಮನದ ನಾಡಿ ಮಿಡಿತ

Advertisement

ಪ್ರಥಮ ಮತ ಚಲಾಯಿಸಲಿರುವ ನೂತನ ಮತದಾರರಿಗೆ ಮತದಾನದ ಮಹತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮ

ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ಸಮಿತಿ, ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ಮೂಡುಬಿದಿರೆ ಸ್ವೀಪ್ ಸಮಿತಿ ವತಿಯಿಂದ ಮೂಡುಬಿದಿರೆ ತಾಲೂಕಿನ ಮಹಾವೀರ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ ಹಾಗೂ ಮಾಹಿತಿ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ವೆಂಕಟಚಲಪತಿಯವರು ಮಾತನಾಡಿ, ಯುವ ವಿದ್ಯಾರ್ಥಿಗಳಿಗೆ ಮತದಾನ ತಮ್ಮ‌ಜೀವನದಲ್ಲಿ ಎಷ್ಟು ಮುಖ್ಯ ಹಾಗೂ ಅದು ನಮ್ಮ‌ ಹಕ್ಕು ಎಂದು ತಿಳಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಎಪ್ರಿಲ್ 26 ರಂದು ಮತಗಟ್ಟೆ ತೆರಳಿ ತಮ್ಮ ಜವಾಬ್ದಾರಿಯಂತೆ ಮತ ಚಲಾಯಿಸಿ ಎಂದರು.

ಮೂಡುಬಿದಿರೆ TLMT ಶ್ರೀಮತಿ ರಂಜಿತಾ ಶೆಟ್ಟಿ ಇವರು ಮತದಾನದ ಮಹತ್ವ, ರಾಷ್ಟ್ರದ ಭವಿಷ್ಯ ನಿರ್ಧರಿಸುವಲ್ಲಿ ಯುವ ಮತದಾರರ ಪಾತ್ರ ಮತ್ತು ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ನಿರ್ಧಾರದ ಬಲದ ಬಗೆಗೆ ಉಪಯುಕ್ತ ಮಾಹಿತಿ ನೀಡಿದರು. ಮುಲ್ಕಿ ಹೋಬಳಿ TLMT ಶ್ರೀಮತಿ ಚಿತ್ರಾಶ್ರೀ ಕೆ.ಎಸ್ ಇವರು ಮತದಾರರಿಗೆ ಚುನಾವಣಾ ಆಯೋಗ ಬಳಕೆಗೆ ತಂದಿರುವ ಉಪಯುಕ್ತ Appಗಳು ಹಾಗೂ ಕ್ಷೇತ್ರದ ಮತದಾನದ ಪ್ರಮಾಣ ಹೆಚ್ಚಿಸುವಲ್ಲಿ ಯುವ ಮತದಾರರ ಪಾತ್ರದ ಬಗೆಗೆ ಸಕಾಲಿಕ ಮಾಹಿತಿ ಒದಗಿಸಿದರು.ಬಳಿಕ ಮತದಾನ ಮಹತ್ವ ತಿಳಿಸಲು ಪ್ರತಿಜ್ಞಾ ವಿಧಿಯನ್ನು‌ಸ್ವೀಕರಿಸಲಾಯಿತು. ಹಾಗೂ ಮತದಾನಕ್ಕೆ ಜಾಗೃತಿ ಗೀತೆಯನ್ನು ವೀಕ್ಷಿಸಲಾಯಿತು.

ಈ ಸಂದರ್ಭದಲ್ಲಿ ಪದವಿ‌ ಕಾಲೇಜು ಪ್ರಾಂಶುಪಾಲರಾದ ಹರೀಶ್(ಪ್ರಭಾರ), ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ರಮೇಶ್‌ಭಟ್ ಉಪಸ್ಥಿತರಿದ್ದರು.

ರಾಜ್ಯಶಾಸ್ತ್ರ ಉಪನ್ಯಾಸಕರಾದ ಪೂರ್ಣಿಮಾ ಅವರು ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ಉಪನ್ಯಾರಾದ ಪ್ರವೀಣ್ ಸ್ವಾಗತಿಸಿದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!