ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ಸಮಿತಿ, ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ಮೂಡುಬಿದಿರೆ ಸ್ವೀಪ್ ಸಮಿತಿ ವತಿಯಿಂದ ಮೂಡುಬಿದಿರೆ ತಾಲೂಕಿನ ಮಹಾವೀರ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ ಹಾಗೂ ಮಾಹಿತಿ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ವೆಂಕಟಚಲಪತಿಯವರು ಮಾತನಾಡಿ, ಯುವ ವಿದ್ಯಾರ್ಥಿಗಳಿಗೆ ಮತದಾನ ತಮ್ಮಜೀವನದಲ್ಲಿ ಎಷ್ಟು ಮುಖ್ಯ ಹಾಗೂ ಅದು ನಮ್ಮ ಹಕ್ಕು ಎಂದು ತಿಳಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಎಪ್ರಿಲ್ 26 ರಂದು ಮತಗಟ್ಟೆ ತೆರಳಿ ತಮ್ಮ ಜವಾಬ್ದಾರಿಯಂತೆ ಮತ ಚಲಾಯಿಸಿ ಎಂದರು.
ಮೂಡುಬಿದಿರೆ TLMT ಶ್ರೀಮತಿ ರಂಜಿತಾ ಶೆಟ್ಟಿ ಇವರು ಮತದಾನದ ಮಹತ್ವ, ರಾಷ್ಟ್ರದ ಭವಿಷ್ಯ ನಿರ್ಧರಿಸುವಲ್ಲಿ ಯುವ ಮತದಾರರ ಪಾತ್ರ ಮತ್ತು ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ನಿರ್ಧಾರದ ಬಲದ ಬಗೆಗೆ ಉಪಯುಕ್ತ ಮಾಹಿತಿ ನೀಡಿದರು. ಮುಲ್ಕಿ ಹೋಬಳಿ TLMT ಶ್ರೀಮತಿ ಚಿತ್ರಾಶ್ರೀ ಕೆ.ಎಸ್ ಇವರು ಮತದಾರರಿಗೆ ಚುನಾವಣಾ ಆಯೋಗ ಬಳಕೆಗೆ ತಂದಿರುವ ಉಪಯುಕ್ತ Appಗಳು ಹಾಗೂ ಕ್ಷೇತ್ರದ ಮತದಾನದ ಪ್ರಮಾಣ ಹೆಚ್ಚಿಸುವಲ್ಲಿ ಯುವ ಮತದಾರರ ಪಾತ್ರದ ಬಗೆಗೆ ಸಕಾಲಿಕ ಮಾಹಿತಿ ಒದಗಿಸಿದರು.ಬಳಿಕ ಮತದಾನ ಮಹತ್ವ ತಿಳಿಸಲು ಪ್ರತಿಜ್ಞಾ ವಿಧಿಯನ್ನುಸ್ವೀಕರಿಸಲಾಯಿತು. ಹಾಗೂ ಮತದಾನಕ್ಕೆ ಜಾಗೃತಿ ಗೀತೆಯನ್ನು ವೀಕ್ಷಿಸಲಾಯಿತು.
ಈ ಸಂದರ್ಭದಲ್ಲಿ ಪದವಿ ಕಾಲೇಜು ಪ್ರಾಂಶುಪಾಲರಾದ ಹರೀಶ್(ಪ್ರಭಾರ), ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ರಮೇಶ್ಭಟ್ ಉಪಸ್ಥಿತರಿದ್ದರು.
ರಾಜ್ಯಶಾಸ್ತ್ರ ಉಪನ್ಯಾಸಕರಾದ ಪೂರ್ಣಿಮಾ ಅವರು ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ಉಪನ್ಯಾರಾದ ಪ್ರವೀಣ್ ಸ್ವಾಗತಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…