ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ಸಮಿತಿ, ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ಮೂಡುಬಿದಿರೆ ಸ್ವೀಪ್ ಸಮಿತಿ ವತಿಯಿಂದ ಮೂಡುಬಿದಿರೆ ತಾಲೂಕಿನ ಮಹಾವೀರ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ ಹಾಗೂ ಮಾಹಿತಿ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ವೆಂಕಟಚಲಪತಿಯವರು ಮಾತನಾಡಿ, ಯುವ ವಿದ್ಯಾರ್ಥಿಗಳಿಗೆ ಮತದಾನ ತಮ್ಮಜೀವನದಲ್ಲಿ ಎಷ್ಟು ಮುಖ್ಯ ಹಾಗೂ ಅದು ನಮ್ಮ ಹಕ್ಕು ಎಂದು ತಿಳಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಎಪ್ರಿಲ್ 26 ರಂದು ಮತಗಟ್ಟೆ ತೆರಳಿ ತಮ್ಮ ಜವಾಬ್ದಾರಿಯಂತೆ ಮತ ಚಲಾಯಿಸಿ ಎಂದರು.
ಮೂಡುಬಿದಿರೆ TLMT ಶ್ರೀಮತಿ ರಂಜಿತಾ ಶೆಟ್ಟಿ ಇವರು ಮತದಾನದ ಮಹತ್ವ, ರಾಷ್ಟ್ರದ ಭವಿಷ್ಯ ನಿರ್ಧರಿಸುವಲ್ಲಿ ಯುವ ಮತದಾರರ ಪಾತ್ರ ಮತ್ತು ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ನಿರ್ಧಾರದ ಬಲದ ಬಗೆಗೆ ಉಪಯುಕ್ತ ಮಾಹಿತಿ ನೀಡಿದರು. ಮುಲ್ಕಿ ಹೋಬಳಿ TLMT ಶ್ರೀಮತಿ ಚಿತ್ರಾಶ್ರೀ ಕೆ.ಎಸ್ ಇವರು ಮತದಾರರಿಗೆ ಚುನಾವಣಾ ಆಯೋಗ ಬಳಕೆಗೆ ತಂದಿರುವ ಉಪಯುಕ್ತ Appಗಳು ಹಾಗೂ ಕ್ಷೇತ್ರದ ಮತದಾನದ ಪ್ರಮಾಣ ಹೆಚ್ಚಿಸುವಲ್ಲಿ ಯುವ ಮತದಾರರ ಪಾತ್ರದ ಬಗೆಗೆ ಸಕಾಲಿಕ ಮಾಹಿತಿ ಒದಗಿಸಿದರು.ಬಳಿಕ ಮತದಾನ ಮಹತ್ವ ತಿಳಿಸಲು ಪ್ರತಿಜ್ಞಾ ವಿಧಿಯನ್ನುಸ್ವೀಕರಿಸಲಾಯಿತು. ಹಾಗೂ ಮತದಾನಕ್ಕೆ ಜಾಗೃತಿ ಗೀತೆಯನ್ನು ವೀಕ್ಷಿಸಲಾಯಿತು.
ಈ ಸಂದರ್ಭದಲ್ಲಿ ಪದವಿ ಕಾಲೇಜು ಪ್ರಾಂಶುಪಾಲರಾದ ಹರೀಶ್(ಪ್ರಭಾರ), ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ರಮೇಶ್ಭಟ್ ಉಪಸ್ಥಿತರಿದ್ದರು.
ರಾಜ್ಯಶಾಸ್ತ್ರ ಉಪನ್ಯಾಸಕರಾದ ಪೂರ್ಣಿಮಾ ಅವರು ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ಉಪನ್ಯಾರಾದ ಪ್ರವೀಣ್ ಸ್ವಾಗತಿಸಿದರು.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…