ಉಡುಪಿ: ನೂರಾರು ವರ್ಷ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರಾಮ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನಗೊಂಡಿತು.
ದೇಗುಲದ ಪ್ರಧಾನ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ ನೇತೃತ್ವದಲ್ಲಿ ದೇಗುಲದ ಆನುವಂಶಿಕ ಮೊಕ್ತೇಸರ ಟಿ. ಶ್ರೀನಿವಾಸ ಭಟ್ ಸಹಕಾರದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರಗಿತು.
ಬೆಳಿಗ್ಗೆ 6.45ರ ಮೀನ ಲಗ್ನ ಸುಮುಹೂರ್ತದಲ್ಲಿ ದೇವರಿಗೆ ಅಷ್ಟಬಂಧ ಬ್ರಹ್ಮಕುಂಭಾಭಿಷೇಕ ನೆರವೇರಿಸಲಾಯಿತು. ಬಳಿಕ ನ್ಯಾಸಪೂಜೆ ಪ್ರಸನ್ನಪೂಜೆ ಅವಸೃತಬಲಿ, ಮಹಾ ಮಂತ್ರಕ್ಷತೆ, ಪ್ರಸಾದ ವಿತರಣೆಯಾಯಿತು. ಮಧ್ಯಾಹ್ನ ಪಲ್ಲಪೂಜೆಯಾಗಿ ಮಹಾಅನ್ನಸಂತರ್ಪಣೆ ನಡೆಯಿತು.
ಸುಮಾರು 15ಸಾವಿರ ಮಂದಿ ಭಕ್ತರು ಪಾಲ್ಗೊಂಡಿದ್ದು ಅನ್ನಪ್ರಸಾದವನ್ನು ಸ್ವೀಕರಿಸಿದರು. ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರ್, ಅಧ್ಯಕ್ಷ ನಾಗರಾಜ್ ಮೂಲಿಗಾರ್, ಪ್ರಧಾನ ಕಾರ್ಯದರ್ಶಿ ಶಶಿಧರ ಎಂ. ಅಮೀನ್, ಪವಿತ್ರಪಾಣಿ ಶಂಕರನಾರಾಯಣ ಐತಾಳ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್, ಉಪಾಧ್ಯಕ್ಷ ರಮೇಶ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಜಿ. ಕೊಡವೂರು ಕಾರ್ಯದರ್ಶಿ ಜನಾರ್ದನ್ ಕೊಡವೂರು, ಹಾಗೂ ಅಭಿವೃದ್ಧಿ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಸದಸ್ಯರು, ಭಕ್ತವೃಂದ, ಗುರಿಕಾರರು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…