ಹಳೆಯಂಗಡಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಕೇಂದ್ರ ಮಹಿಳಾ ಘಟಕ ಇದರ ಸಪ್ತಮ ವಾರ್ಷಿಕೋತ್ಸವ ಹಳೆಯಂಗಡಿ ಸಮೀಪದ ಶ್ರೀ ಪಾವಂಜೆ ಕ್ಷೇತ್ರದಲ್ಲಿ ನಡೆಯಿತು.
ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ನಾರಾಯಣ ಪಾಟಾಳಿ, ಕಲಾ ಪೋಷಕರಾದ ಶಕುಂತಳಾ ರಮಾನಂದ ಭಟ್, ಸಂಧ್ಯಾ ಜಯದೇವ ಐತಾಳ್, ಪಟ್ಲ ಫೌಂಡೇಶನ್ ನ ಟ್ರಸ್ಟಿ ಸಹನಾ ರಾಜೇಶ್ ರೈ, ಜೆಸಿಐ ಸುರತ್ಕಲ್ ಘಟಕದ ಅಧ್ಯೆಕ್ಷೆ ಜ್ಯೋತಿ ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಶ್ರೀಕುಮಾರ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಹಳುವಳ್ಳಿ ಇದರ ನಿರ್ದೇಶಕಿ ಜ್ಯೋತಿ ಟಿ ಎನ್ ಕಳಸ, ಧೀಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇದರ ನಿರ್ದೇಶಕಿ ಪದ್ಮಾ ಕೆ ಆರ್ ಆಚಾರ್ಯ ಪುತ್ತೂರು, ಯಕ್ಷಗಾನ ತಾಳಮದ್ದಲೆ ಕಲಾವಿದೆ ರೇವತಿ ನವೀನ್ ಕುಳಾಯಿ ಇವರನ್ನು ಸನ್ಮಾನಿಸಲಾಯಿತು. ಪಟ್ಲ ಪೌಂಡೇಶನ್ ಟ್ರಸ್ಟ್ ನ ಕೋಶಾಧಿಕಾರಿ ಸುದೇಶ್ ಕುಮಾರ್ ರೈ ಉಪಸ್ಥಿತರಿದ್ದರು. ಮಹಿಳಾ ಕೇಂದ್ರೀಯ ಘಟಕದ ಅಧ್ಯೆಕ್ಷೆ ಪೂರ್ಣಿಮಾ ಶೆಟ್ಟಿ ಸ್ವಾಗತಿಸಿದರು. ಗೌರವಾಧ್ಯೆಕ್ಷೆ ಆರತಿ ಆಳ್ವ ವಂದಿಸಿದರು. ಸಾಯಿಸುಮ ನಾವಡ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಪಾವಂಜೆ ಮೇಳದಿಂದ ಧರ್ಮಸಿಂಹಾಸನ ಯಕ್ಷಗಾನ ಪ್ರದರ್ಶನಗೊಂಡಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…