ಸುಬ್ರಹ್ಮಣ್ಯ :ಬ್ಯಾಂಕ್ ಆಫ್ ಬರೋಡ ಸುಬ್ರಹ್ಮಣ್ಯ ಶಾಖೆಯು ಸ್ಥಳಾಂತರಗೊಂಡು ನೂತನ ಕಟ್ಟಡ ಅಕ್ಷರ ವಸತಿ ಗ್ರಹದ ಕೆಳ ತಳ ಅಂತಸ್ತಿನಲ್ಲಿ ಆರಂಭಗೊಂಡಿರುತ್ತದೆ.
ಶಾಖೆಯನ್ನು ಬ್ಯಾಂಕ್ ಆಫ್ ಬರೋಡ ಮಂಗಳೂರು ವಲಯದ ಜನರಲ್ ಮ್ಯಾನೇಜರ್ ಗಾಯತ್ರಿ ಆರ್ ಅವರು ಟೇಪ್ ಅನ್ನು ಕತ್ತರಿಸಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಅವರು ಮಾತನಾಡಿ, ಸುಬ್ರಹ್ಮಣ್ಯದಂತಹ ಗ್ರಾಮೀಣ ಪ್ರದೇಶದಲ್ಲಿ ನಮ್ಮ ಶಾಖೆಗೆ ಉತ್ತಮ ಸ್ಪಂದನೆ ದೊರೆತಿದೆ. ಇಲ್ಲಿಯ ಗ್ರಾಹಕರ ಬೇಡಿಕೆಗನುಗುಣವಾಗಿ ಹಾಗೂ ಅವರ ಅನುಕೂಲಕ್ಕಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದವರು ನಮಗೆ ಉತ್ತಮವಾದ ಸ್ಥಳವನ್ನು ನೀಡಿರುತ್ತಾರೆ. ಇಲ್ಲಿಯ ಶಾಖೆಗೆ ಎಲ್ಲಾ ಗ್ರಾಹಕರು ಹಾಗೂ ದೇವಳದ ನೌಕರರು ಮತ್ತು ವಿಶೇಷವಾಗಿ ಅಕ್ಕಪಕ್ಕದ ಊರುಗಳ ಕೃಷಿಕರು ಬಹಳಷ್ಟು ಸ್ಪಂದನೆ ನೀಡಿರುತ್ತಾರೆ. ಎಲ್ಲರ ಸಹಕಾರದೊಂದಿಗೆ ಈ ಶಾಖೆಯು ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸುತ್ತೇನೆ ಎಂದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಮಂಗಳೂರು ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಜನಾರ್ದನ, ಪುತ್ತೂರು ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ವ್ಯವಸ್ಥಾಪಕರಾದ ದೇವಿ ಪ್ರಸಾದ ಶೆಟ್ಟಿ, ಉಪ ಪ್ರಾದೇಶಿಕ ವ್ಯವಸ್ಥಾಪಕ ಶ್ರೀ ಮೂರ್ತಿ, ಹತ್ತಿರದ ಬ್ಯಾಂಕ್ ಆಫ್ ಬರೋಡ ಶಾಖೆಯ ವ್ಯವಸ್ಥಾಪಕರು ,ಹಾಗೂ ಗ್ರಾಹಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಶಾಖೆಯ ವ್ಯವಸ್ಥಾಪಕರಾದ ಕೃಷ್ಣಪ್ರಸಾದ್ ಅವರು ಸ್ವಾಗತಿಸಿದರು . ನೋಜಿ ಬಾಳ್ತಿಲ ಶಾಖೆಯ ವ್ಯವಸ್ಥಾಪಕರಾದ ಶಿವಪ್ರಸಾದ್ ನಿರೂಪಿಸಿದ ಕಾರ್ಯಕ್ರಮದ ಕೊನೆಯಲ್ಲಿ ಪ್ರಾದೇಶಿಕ ವ್ಯವಸ್ಥಾಪಕ ದೇವಿ ಪ್ರಸಾದ್ ಶೆಟ್ಟಿ ಹೊಂದಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…