ಇತರೆ

ಯುವಶಕ್ತಿ ಸೇವಾಪಥದ ದ್ವೀತಿಯ ವಾರ್ಷಿಕೋತ್ಸವ… ಸೇವಾ ಸಂಭ್ರಮ”

ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸೇವಾಕಾರ್ಯದಲ್ಲಿ ಸಮಾಜಕ್ಕೆ ನಿರಂತರವಾಗಿ ಸ್ಪಂದಿಸುತ್ತಿರುವ ಯುವಶಕ್ತಿ ಸೇವಾಪಥವು ತನ್ನ ದ್ವೀತಿಯ ವಾರ್ಷಿಕೋತ್ಸವ “ಸೇವಾ ಸಂಭ್ರಮ”ಬಂಟ್ವಾಳ ತಾಲೂಕು ಮಣಿ ನಾಲ್ಕೂರು ಗ್ರಾಮದ ಬಡೆಕೊಟ್ಟು, ಕಟ್ಟದಪಡ್ಪು ಅರುಣೋದಯ ಸಭಾಭವನ ದಲ್ಲಿ ಇತ್ತೀಚೆಗೆ ಜರಗಿತು .

ಸಮಾಜ ಬಂಧುಗಳಿಂದ ಸಂಗ್ರಹಿಸಿ , ಜಿಲ್ಲೆಯ ವಿವಿಧ ಭಾಗದ ಒಟ್ಟು 11 ಜನ ಅನಾರೋಗ್ಯ ಪೀಡಿತ ಫಲಾನುಭವಿಗಳಿಗೆ ನಾಲ್ಕು ಲಕ್ಷ ರೂಗಳ ಆರ್ಥಿಕ ಸಹಕಾರ ನೀಡುವುದರ ಮೂಲಕ ಯುವಶಕ್ತಿ ಸೇವಾಪಥವು ಶಕ್ತ ಸಮಾಜ ಮತ್ತು ಅಶಕ್ತ ಸಮಾಜದ ನಡುವಿನ ಕೊಂಡಿಯೆನಿಸಿತು.

ಯುವಶಕ್ತಿ ರಕ್ತನಿಧಿಯ 10 ಸಾವಿರ ಯುನಿಟ್ ರಕ್ತದ ಪೂರೈಕೆಯ ಸಾರ್ಥಕತೆಯನ್ನು ಈ ಕ್ಷಣ ಸಂಭ್ರಮಿಸಲಾಯಿತು

ಈ ಸಂದರ್ಭದಲ್ಲಿ ಹಿಂದೂ ಯುವಸೇನೆಯ ಅಂಬ್ಯುಲೆನ್ಸ್‌ನಲ್ಲಿ ನಿರಂತರ ಸೇವೆಗೈಯುತ್ತಿರುವ ಅಪದ್ಬಾಂಧವ ಚಾಲಕ ರಘು ರವರನ್ನು ಮತ್ತು ನಿರಂತರ ಸಮಾಜ ಸೇವೆಗೈಯುವ ಮಂಗಳೂರು ಪರಿಸರದ ಯುವ ಕಾರ್ಪೋರೇಟರ್ ಗಣೇಶ ಕುಲಾಲ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕರಾದ ವಾಸು ಪೂಜಾರಿಯವರು ವಹಿಸಿಕೊಂಡಿದ್ದರು.

ಅತಿಥಿಗಳಾಗಿ ತೆಂಕ ಕಜೆಕಾರ್ ಪಂಚಾಯಿತಿ ಸದಸ್ಯರಾದ ಸತೀಶ್ ಪೂಜಾರಿ ಕಜೆಕಾರ್ , ಪ್ರಗತಿಪರ ಕೃಷಿಕರಾದ ರೂಪೇಶ್ ಪೂಜಾರಿ ಬಡೆಕೊಟ್ಟು, ಅರುಣೋದಯ ಭಜನಾ ಮಂದಿರದ ಅಧ್ಯಕ್ಷರಾದ ಹೊನ್ನಪ್ಪ ಪೂಜಾರಿ ಮುದಲಾಡಿ, ಶಿವ ಛತ್ರಪತಿ ಸಂಸ್ಥೆಯ ಸುನೀಲ್ ಬಡೆಕೊಟ್ಟು ಪಾಲ್ಗೊಂಡು ಸೇವಾ ಸಂಭ್ರಮಕ್ಕೆ ಸಾಕ್ಷಿಯಾಗಿ ಶುಭ ಹಾರೈಸಿದರು.

ಯುವಶಕ್ತಿ ಬಂಧುಗಳು ತಮ್ಮ ಶುಭ ಸಂಭ್ರಮದಲ್ಲಿ ಸಮಾಜಕ್ಕೂ ಒಂದು ಪಾಲು ಯೆಂಬಂತೆ ಅರ್ಪಿಸಿದ ಶುಭನಿಧಿಯಲ್ಲಿ 3 ನೇ ಯೋಜನೆಯ ಮೂಲಕ 45,000/- ಮೌಲ್ಯದ ಶುದ್ದ ಕುಡಿಯುವ ನೀರಿನ ಘಟಕವನ್ನು ಸ್ಥಳೀಯ ಮಣಿನಾಲ್ಕೂರು ಸರ್ಕಾರಿ ಶಾಲೆಗೆ ಹಸ್ತಾಂತರಿಸಲಾಯಿತು.
ಯುವಶಕ್ತಿ ಸೇವಾಪಥದ ಒಟ್ಟಿಗೆ ಸದಾ ಜೊತೆಯಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಿತ್ರಸಂಸ್ಥೆಗಳನ್ನು ಅಭಿನಂದಿಸಲಾಯಿತು.
ಯುವಶಕ್ತಿ ಕಡೇಶಿವಾಲಯ(ರಿ) ವತಿಯಿಂದ ಆಯೋಜಿಸಲಾಗಿದ್ದ ಜೈಶ್ರೀರಾಮ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು
ಹಿಂಜಾವೇ ಪ್ರಮುಖರಾದ ದಾಮೋದರ ನೆತ್ತರಕೆರೆ ಮುಖ್ಯ ಭಾಷಣಗೈದು
ಸೇವಾಪಥ ನಡೆದು ಬಂದ ಸಿಂಹಾವಲೋಕನವನ್ನು ತಿಲಕ್ ಮುಂಡಾಲ ಮಂಡಿಸಿದರು.

ದಿನೇಶ್ ಬಡೆಕೊಟ್ಟು ಪ್ರಾಸ್ತವಿಕ ಮಾತಾನಾಡಿ
ಪ್ರಕಾಶ್ ಮುಂಡಾಲ ಸ್ವಾಗತಿಸಿ ವಿಜಿತ್ ಸಂಪೋಳಿ ವಂದಿಸಿದರು.
ದೇವದಾಸ್ ಅಬುರ ಕಾರ್ಯಕ್ರಮ ನಿರೂಪಿಸಿದರು.
ಹಲವು ಗಣ್ಯರು ಸೇವಾಮಾಣಿಕ್ಯರು.ಯುವಶಕ್ತಿಯ ಸದಸ್ಯರು ದ್ವಿತೀಯ ಸೇವಾಸಂಭ್ರಮಕ್ಕೆ ಸಾಕ್ಷಿಯಾದರು. ಯುವಶಕ್ತಿ ಸೇವಾಪಥ ತನ್ನ ಸೇವಾ ಯೋಜನೆಯ ಮೂಲಕ ಈತನಕ ಒಟ್ಟು 78 ಲಕ್ಷ ರೂಪಾಯಿಗಳನ್ನು ಸಮಾಜದಿಂದ ಸಮಾಜಕ್ಕೆ ಸಮರ್ಪಿಸಲಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

47 mins ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

50 mins ago

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…

52 mins ago

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…

55 mins ago

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…

2 days ago

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…

2 days ago