ಜನ ಮನದ ನಾಡಿ ಮಿಡಿತ

Advertisement

ಥ್ರೆಡ್ಸ್: ಟ್ವಿಟರ್​ ಮಾದರಿಯ ಥ್ರೆಡ್ಸ್‌​ ಅಪ್ಲಿಕೇಶನ್; ಎಲಾನ್​ ಮಸ್ಕ್​ಗೆ ಮೆಟಾ ಸವಾಲು

ಮೆಟಾ ಸಂಸ್ಥೆಯು ಟ್ವಿಟರ್​ ಮಾದರಿಯ ಥ್ರೆಡ್ಸ್‌​ ಆಪ್ ಅನ್ನು​ ಅನಾವರಣಗೊಳಿಸಿದ್ದು, ವಿಶ್ವದ 100 ದೇಶಗಳಲ್ಲಿ ಸದ್ಯಕ್ಕೆ ಲಭ್ಯವಿದೆ. ಯುರೋಪ್​ ರಾಷ್ಟ್ರಗಳಲ್ಲಿ ಇದು ಬಿಡುಗಡೆಯಾಗಿಲ್ಲ.

ಲಂಡನ್: ಜನಪ್ರಿಯ ಮೈಕ್ರೋಬ್ಲಾಗಿಂಗ್​ ಟ್ವಿಟರ್​ ಮಾಲೀಕ ಎಲಾನ್​ ಮಸ್ಕ್​ ದಿನಕ್ಕೊಂದು ಷರತ್ತು, ನಿಯಮ ಹಾಕುತ್ತಿದ್ದು, ಬಳಕೆದಾರರ ತಲೆ ಕೆಡಿಸಿದೆ.

ಮೊದಲು ಬ್ರಿಟನ್​ನಲ್ಲಿ ಆಪಲ್ ಮತ್ತು ಗೂಗಲ್​ ಆಂಡ್ರಾಯ್ಡ್​ ಅಪ್ಲಿಕೇಶನ್ ಸ್ಟೋರ್‌ಗಳಲ್ಲಿ ಲಭ್ಯವಿತ್ತು. ಇದೀಗ ಆಸ್ಟ್ರೇಲಿಯಾ, ಕೆನಡಾ ಮತ್ತು ಜಪಾನ್ ಸೇರಿದಂತೆ 100 ಕ್ಕೂ ಅಧಿಕ ದೇಶಗಳಲ್ಲಿ ಬಳಕೆಗೆ ಸಿಗಲಿದೆ.

ಥ್ರೆಡ್ಸ್‌ ವಿಶೇಷತೆಗಳೇನು?:
ಎಲಾನ್​ ಮಸ್ಕ್​ ದೈನಂದಿನ ಟ್ವಿಟರ್​ ಬಳೆಕೆಯ ಮೇಲೂ ಮಿತಿ ಹೇರಿದ್ದು, ಅದಕ್ಕೆ ಪರ್ಯಾಯವಾಗಿ ಮೆಟಾ ಸಂಸ್ಥೆಯು ಥ್ರೆಡ್ಸ್‌​ ಅನ್ನು ಬಿಡುಗಡೆ ಮಾಡಿದೆ ಎಂದೇ ಹೇಳಲಾಗಿದೆ. ಮೆಟಾ ಒಡೆತನದ ಥ್ರೆಡ್ಸ್‌​ ಟ್ವಿಟರ್​​ನಂತೆ ಫೋಟೋ, ವಿಡಿಯೋ, ಮಾಹಿತಿಯನ್ನು ಹಂಚಿಕೊಳ್ಳಬಹುದಾಗಿದೆ. ಈಗಿರುವ ಇನ್​​ಸ್ಟಾಗ್ರಾಮ್​ ಖಾತೆ ಮೂಲಕವೇ ಡೌನ್‌​ಲೋಡ್​ ಮಾಡಿಕೊಂಡು ಬಳಕೆ ಮಾಡಬಹುದು. ಥ್ರೆಡ್ಸ್‌​​ ಆಯಪ್​ನಲ್ಲಿ ಲೈಕ್​, ಪೋಸ್ಟ್​, ರೀಪೋಸ್ಟ್​, ಎಡಿಟ್​, ರಿಸೀವ್ಡ್​​ ಲೈಕ್ಸ್​ ಅಂಡ್​ ಕಾಮೆಂಟ್​ ಸೆಕ್ಷನ್​ ನೀಡಲಾಗಿದೆ. ಥೇಟ್ ಟ್ವಿಟರ್​ನಂತೆಯೇ ರೂಪಿಸಲಾಗಿದೆ.

ಇಲ್ಲಿ ಫೋಟೋ, ವಿಡಿಯೋಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಬಹುದು. ಅದಕ್ಕೆ ಬರುವ ಕಾಮೆಂಟ್​, ಲೈಕ್ಸ್​ಗಳು ಕೆಳಭಾಗದಲ್ಲಿ ಕಾಣಸಿಗುತ್ತವೆ. ಇಲ್ಲಿ ಇಂದಿನ ವಿಷಯಗಳ ಚರ್ಚೆಯ ಜೊತೆಗೆ ನಾಳೆಗೆ ಟ್ರೆಂಡ್​ ಆಗುವ ಸಬ್ಜೆಕ್ಸ್​ ಬಗ್ಗೆಯೂ ಚರ್ಚೆ ಮಾಡಬಹುದು. ಹೀಗಾಗಿ ಇದು ಇನ್​ಸ್ಟಾಗ್ರಾಮ್​ನ ಮುಂದುವರಿದ ಭಾಗ ಎಂದೇ ಹೇಳಬಹುದು ಎಂದು ಕಂಪನಿ ತಿಳಿಸಿದೆ. ಥ್ರೆಡ್ಸ್‌​ನಲ್ಲಿ 500 ಅಕ್ಷರಗಳವರೆಗೆ ಒಂದು ಪೋಸ್ಟ್‌ ಹಾಕಬಹುದು. ಟ್ವಿಟರ್​ನಲ್ಲಿ 280 ಅಕ್ಷರ ಮಿತಿಗಿಂತ ಇದು ಹೆಚ್ಚು. ಐದು ನಿಮಿಷಗಳ ಉದ್ದದಷ್ಟು ಲಿಂಕ್‌ಗಳು, ಫೋಟೋಗಳು ಮತ್ತು ವಿಡಿಯೊಗಳನ್ನು ಪೋಸ್ಟ್​ ಮಾಡಬಹುದು. ಇನ್​ಸ್ಟಾಗ್ರಾಮ್​ ಖಾತೆಯಿಂದಲೇ ಇದರಲ್ಲಿ ಲಾಗ್​​ಇನ್​ ಆಗಬಹುದು. ಹೊಸದಾಗಿ ಲಾಗ್​​​ಇನ್​ ಬೇಕಾಗಿಲ್ಲ. ಡೇಟಾ ಲೀಕ್​ ಆಗುವುದನ್ನು ತಡೆಯುವ ಕ್ರಮ ಎಂಬುದು ಕಂಪನಿಯ ಹೇಳಿಕೆ.

ಆರ್ಥಿಕ ಸವಾಲಿನ ಕಾರಣದಿಂದ ಮೆಟಾ ಸಂಸ್ಥೆಯ ಹಲವಾರು ಕಂಪನಿಗಳಲ್ಲಿ ಉದ್ಯೋಗ ಕಡಿತ ಮಾಡಿ, ಈಗ ಟ್ವಿಟರ್​ ಮಾದರಿಯ ಥ್ರೆಡ್ಸ್‌​ ಆಯಪ್​ ಪರಿಚಯಿಸಿದ್ದ ಕ್ರಮವನ್ನು ಹಲವರು ಟೀಕಿಸಿದ್ದಾರೆ. ಟೆಕ್​ ಉದ್ಯಮ ಹೊಡೆತಕ್ಕೀಡಾದ ಸಂದರ್ಭದಲ್ಲಿ ಥ್ರೆಡ್ಸ್‌ ಯಾವ ರೀತಿಯ ಬೆಳವಣಿಗೆ ಕಾಣಲಿದೆ ಎಂಬುದು ಮಿಲಿಯನ್​ ಡಾಲರ್​ ಪ್ರಶ್ನೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!