ಜನ ಮನದ ನಾಡಿ ಮಿಡಿತ

Advertisement

ಥ್ರೆಡ್ಸ್: ಟ್ವಿಟರ್​ ಮಾದರಿಯ ಥ್ರೆಡ್ಸ್‌​ ಅಪ್ಲಿಕೇಶನ್; ಎಲಾನ್​ ಮಸ್ಕ್​ಗೆ ಮೆಟಾ ಸವಾಲು

ಮೆಟಾ ಸಂಸ್ಥೆಯು ಟ್ವಿಟರ್​ ಮಾದರಿಯ ಥ್ರೆಡ್ಸ್‌​ ಆಪ್ ಅನ್ನು​ ಅನಾವರಣಗೊಳಿಸಿದ್ದು, ವಿಶ್ವದ 100 ದೇಶಗಳಲ್ಲಿ ಸದ್ಯಕ್ಕೆ ಲಭ್ಯವಿದೆ. ಯುರೋಪ್​ ರಾಷ್ಟ್ರಗಳಲ್ಲಿ ಇದು ಬಿಡುಗಡೆಯಾಗಿಲ್ಲ.

ಲಂಡನ್: ಜನಪ್ರಿಯ ಮೈಕ್ರೋಬ್ಲಾಗಿಂಗ್​ ಟ್ವಿಟರ್​ ಮಾಲೀಕ ಎಲಾನ್​ ಮಸ್ಕ್​ ದಿನಕ್ಕೊಂದು ಷರತ್ತು, ನಿಯಮ ಹಾಕುತ್ತಿದ್ದು, ಬಳಕೆದಾರರ ತಲೆ ಕೆಡಿಸಿದೆ.

ಮೊದಲು ಬ್ರಿಟನ್​ನಲ್ಲಿ ಆಪಲ್ ಮತ್ತು ಗೂಗಲ್​ ಆಂಡ್ರಾಯ್ಡ್​ ಅಪ್ಲಿಕೇಶನ್ ಸ್ಟೋರ್‌ಗಳಲ್ಲಿ ಲಭ್ಯವಿತ್ತು. ಇದೀಗ ಆಸ್ಟ್ರೇಲಿಯಾ, ಕೆನಡಾ ಮತ್ತು ಜಪಾನ್ ಸೇರಿದಂತೆ 100 ಕ್ಕೂ ಅಧಿಕ ದೇಶಗಳಲ್ಲಿ ಬಳಕೆಗೆ ಸಿಗಲಿದೆ.

ಥ್ರೆಡ್ಸ್‌ ವಿಶೇಷತೆಗಳೇನು?:
ಎಲಾನ್​ ಮಸ್ಕ್​ ದೈನಂದಿನ ಟ್ವಿಟರ್​ ಬಳೆಕೆಯ ಮೇಲೂ ಮಿತಿ ಹೇರಿದ್ದು, ಅದಕ್ಕೆ ಪರ್ಯಾಯವಾಗಿ ಮೆಟಾ ಸಂಸ್ಥೆಯು ಥ್ರೆಡ್ಸ್‌​ ಅನ್ನು ಬಿಡುಗಡೆ ಮಾಡಿದೆ ಎಂದೇ ಹೇಳಲಾಗಿದೆ. ಮೆಟಾ ಒಡೆತನದ ಥ್ರೆಡ್ಸ್‌​ ಟ್ವಿಟರ್​​ನಂತೆ ಫೋಟೋ, ವಿಡಿಯೋ, ಮಾಹಿತಿಯನ್ನು ಹಂಚಿಕೊಳ್ಳಬಹುದಾಗಿದೆ. ಈಗಿರುವ ಇನ್​​ಸ್ಟಾಗ್ರಾಮ್​ ಖಾತೆ ಮೂಲಕವೇ ಡೌನ್‌​ಲೋಡ್​ ಮಾಡಿಕೊಂಡು ಬಳಕೆ ಮಾಡಬಹುದು. ಥ್ರೆಡ್ಸ್‌​​ ಆಯಪ್​ನಲ್ಲಿ ಲೈಕ್​, ಪೋಸ್ಟ್​, ರೀಪೋಸ್ಟ್​, ಎಡಿಟ್​, ರಿಸೀವ್ಡ್​​ ಲೈಕ್ಸ್​ ಅಂಡ್​ ಕಾಮೆಂಟ್​ ಸೆಕ್ಷನ್​ ನೀಡಲಾಗಿದೆ. ಥೇಟ್ ಟ್ವಿಟರ್​ನಂತೆಯೇ ರೂಪಿಸಲಾಗಿದೆ.

ಇಲ್ಲಿ ಫೋಟೋ, ವಿಡಿಯೋಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಬಹುದು. ಅದಕ್ಕೆ ಬರುವ ಕಾಮೆಂಟ್​, ಲೈಕ್ಸ್​ಗಳು ಕೆಳಭಾಗದಲ್ಲಿ ಕಾಣಸಿಗುತ್ತವೆ. ಇಲ್ಲಿ ಇಂದಿನ ವಿಷಯಗಳ ಚರ್ಚೆಯ ಜೊತೆಗೆ ನಾಳೆಗೆ ಟ್ರೆಂಡ್​ ಆಗುವ ಸಬ್ಜೆಕ್ಸ್​ ಬಗ್ಗೆಯೂ ಚರ್ಚೆ ಮಾಡಬಹುದು. ಹೀಗಾಗಿ ಇದು ಇನ್​ಸ್ಟಾಗ್ರಾಮ್​ನ ಮುಂದುವರಿದ ಭಾಗ ಎಂದೇ ಹೇಳಬಹುದು ಎಂದು ಕಂಪನಿ ತಿಳಿಸಿದೆ. ಥ್ರೆಡ್ಸ್‌​ನಲ್ಲಿ 500 ಅಕ್ಷರಗಳವರೆಗೆ ಒಂದು ಪೋಸ್ಟ್‌ ಹಾಕಬಹುದು. ಟ್ವಿಟರ್​ನಲ್ಲಿ 280 ಅಕ್ಷರ ಮಿತಿಗಿಂತ ಇದು ಹೆಚ್ಚು. ಐದು ನಿಮಿಷಗಳ ಉದ್ದದಷ್ಟು ಲಿಂಕ್‌ಗಳು, ಫೋಟೋಗಳು ಮತ್ತು ವಿಡಿಯೊಗಳನ್ನು ಪೋಸ್ಟ್​ ಮಾಡಬಹುದು. ಇನ್​ಸ್ಟಾಗ್ರಾಮ್​ ಖಾತೆಯಿಂದಲೇ ಇದರಲ್ಲಿ ಲಾಗ್​​ಇನ್​ ಆಗಬಹುದು. ಹೊಸದಾಗಿ ಲಾಗ್​​​ಇನ್​ ಬೇಕಾಗಿಲ್ಲ. ಡೇಟಾ ಲೀಕ್​ ಆಗುವುದನ್ನು ತಡೆಯುವ ಕ್ರಮ ಎಂಬುದು ಕಂಪನಿಯ ಹೇಳಿಕೆ.

ಆರ್ಥಿಕ ಸವಾಲಿನ ಕಾರಣದಿಂದ ಮೆಟಾ ಸಂಸ್ಥೆಯ ಹಲವಾರು ಕಂಪನಿಗಳಲ್ಲಿ ಉದ್ಯೋಗ ಕಡಿತ ಮಾಡಿ, ಈಗ ಟ್ವಿಟರ್​ ಮಾದರಿಯ ಥ್ರೆಡ್ಸ್‌​ ಆಯಪ್​ ಪರಿಚಯಿಸಿದ್ದ ಕ್ರಮವನ್ನು ಹಲವರು ಟೀಕಿಸಿದ್ದಾರೆ. ಟೆಕ್​ ಉದ್ಯಮ ಹೊಡೆತಕ್ಕೀಡಾದ ಸಂದರ್ಭದಲ್ಲಿ ಥ್ರೆಡ್ಸ್‌ ಯಾವ ರೀತಿಯ ಬೆಳವಣಿಗೆ ಕಾಣಲಿದೆ ಎಂಬುದು ಮಿಲಿಯನ್​ ಡಾಲರ್​ ಪ್ರಶ್ನೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!