ಉಡುಪಿ: ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಕ್ಷುಲ್ಲಕ ಕಾರಣಕ್ಕಾಗಿ ತಮ್ಮ ತನ್ನ ಅಣ್ಣನನ್ನೇ ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದಾನೆ.
ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ನಾಲ್ಕೂರು ಗ್ರಾಮದ ಕಜ್ಕೆ ಅರಮನೆಜೆಡ್ಡು ನಿವಾಸಿ ಗುಲಾಬಿ ಎಂಬವರ ಮಗ ಮಂಜುನಾಥ (೩೫) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ, ಮೃತರ ತಮ್ಮ ವಿಶ್ವನಾಥ್ (೩೦) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ಮತ್ತು ವಿಶ್ವನಾಥ ಒಂದೇ ಮನೆಯಲ್ಲಿ ವಾಸವಾಗಿದ್ದರು. ಆಗಾಗ ಇವರ ಮಧ್ಯೆ ಗಲಾಟೆ ಆಗುತ್ತಿದ್ದು, ಮಧ್ಯರಾತ್ರಿ ವೇಳೆ ಮಂಜುನಾಥ, ತನ್ನ ತಮ್ಮ ವಿಶ್ವನಾಥನನ್ನು ಉದ್ದೇಶಿಸಿ, ನನ್ನ ಹೆಂಡತಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿದನು. ಇದೇ ವಿಚಾರದಲ್ಲಿ ವಿಶ್ವನಾಥ ಕೋಪ ಗೊಂಡು ಛಾವಣಿಯಲ್ಲಿದ್ದ ದೊಣ್ಣೆಯಿಂದ ಮಂಜುನಾಥ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ ಎನ್ನಲಾಗಿದೆ.
ಇದರ ಪರಿಣಾಮ ಮಂಜುನಾಥ್ ಅವರ ತಲೆಯಿಂದ ತೀವ್ರ ರಕ್ತ ಹರಿದು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ಕರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ, ಕರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್., ಹೆಬ್ರಿ ಪೊಲೀಸ್ ಠಾಣಾಧಿಕಾರಿ ಮಹೇಶ ಟಿ.ಎಂ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…