ಜನ ಮನದ ನಾಡಿ ಮಿಡಿತ

Advertisement

ಸುರತ್ಕಲ್ : ಎನ್. ಐ . ಟಿ . ಕೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಮನೋವಿಕಸನದ ದೃಷ್ಟಿಯಿಂದ ಎನ್. ಐ .ಟಿ .ಕೆ . ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 1/4/2024 ರಿಂದ 6/4/2024 ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಮನೋವಿಕಸನದ ದೃಷ್ಟಿಯಿಂದ ಎನ್. ಐ .ಟಿ .ಕೆ . ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 1/4/2024 ರಿಂದ 6/4/2024 ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿ ಕೆ .ಆರ್ .ಇ .ಸಿ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ , ಶ್ರೀಮತಿ ಲತಾ , ಶಾಲಾ ಪ್ರಾಂಶುಪಾಲೆ ಶ್ರೀಮತಿ ಪ್ರಮೀಳ ಹಾಗೂ ಹಿರಿಯ ಪ್ರಾಧ್ಯಾಪಕರಾದ ಶ್ರೀ ಸುಬ್ರಮಣ್ಯ ಭಟ್ ದೀಪ ಪ್ರಜ್ವಲನೆ ನೆರವೇರಿಸುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿ ಶ್ರೀಮತಿ ಲತಾ ರವರು ಮಕ್ಕಳಿಗೆ ಪ್ರೋತ್ಸಾಹಕ ಮಾತುಗಳನ್ನಾಡುವ ಮೂಲಕ ಕ್ರಿಯಾತ್ಮಕವಾಗಿ ಭಾಗವಹಿಸಲು ಹುರಿದುಂಬಿಸಿದರು . ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸಿಕ್ಕಂತಹ ಅವಕಾಶವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳುವ ಮೂಲಕ ಮಕ್ಕಳಲ್ಲಿ ಸೃಜನಾತ್ಮಕ ಪ್ರತಿಭೆಯನ್ನು ಹೊರ ತರುವಲ್ಲಿ ಯಶಸ್ವಿಯಾಗಬೇಕೆಂದು ಮಕ್ಕಳಿಗೆ ಮನವರಿಕೆ ಮಾಡಿದರು . ಸಂಸ್ಕೃತ ವಿದ್ವಾನ್ ಸುಬ್ರಹ್ಮಣ್ಯ ಭಟ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು . ರಸ್ತೆ ಸುರಕ್ಷತೆಯ ಜಾಗೃತಿಯ ಕುರಿತು ಶಾಲಾ ಶಿಕ್ಷಕಿ ಶ್ರೀಮತಿ ಪ್ರಭಾವತಿಯವರು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿ , ರಸ್ತೆ ನಿಯಮದ ಪ್ರತಿಜ್ಞಾವಿಧಿಯನ್ನು ತೆಗೆದುಕೊಳ್ಳಲಾಯಿತು . ಕಲಾ ಶಿಕ್ಷಕಿ ಶ್ರೀಮತಿ ಗೀತಾ ರವರು ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ವನಿತಾ ರವರು ಹಾಗೂ ಚಿತ್ರಕಲಾ ಶಿಕ್ಷಕರಾದ ಶ್ರೀ ಧನಂಜಯ್ . ಬಿ ಅವರು ವಂದನಾರ್ಪಣೆಗೈದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!