ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಮನೋವಿಕಸನದ ದೃಷ್ಟಿಯಿಂದ ಎನ್. ಐ .ಟಿ .ಕೆ . ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 1/4/2024 ರಿಂದ 6/4/2024 ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಮನೋವಿಕಸನದ ದೃಷ್ಟಿಯಿಂದ ಎನ್. ಐ .ಟಿ .ಕೆ . ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 1/4/2024 ರಿಂದ 6/4/2024 ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿ ಕೆ .ಆರ್ .ಇ .ಸಿ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ , ಶ್ರೀಮತಿ ಲತಾ , ಶಾಲಾ ಪ್ರಾಂಶುಪಾಲೆ ಶ್ರೀಮತಿ ಪ್ರಮೀಳ ಹಾಗೂ ಹಿರಿಯ ಪ್ರಾಧ್ಯಾಪಕರಾದ ಶ್ರೀ ಸುಬ್ರಮಣ್ಯ ಭಟ್ ದೀಪ ಪ್ರಜ್ವಲನೆ ನೆರವೇರಿಸುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿ ಶ್ರೀಮತಿ ಲತಾ ರವರು ಮಕ್ಕಳಿಗೆ ಪ್ರೋತ್ಸಾಹಕ ಮಾತುಗಳನ್ನಾಡುವ ಮೂಲಕ ಕ್ರಿಯಾತ್ಮಕವಾಗಿ ಭಾಗವಹಿಸಲು ಹುರಿದುಂಬಿಸಿದರು . ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸಿಕ್ಕಂತಹ ಅವಕಾಶವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳುವ ಮೂಲಕ ಮಕ್ಕಳಲ್ಲಿ ಸೃಜನಾತ್ಮಕ ಪ್ರತಿಭೆಯನ್ನು ಹೊರ ತರುವಲ್ಲಿ ಯಶಸ್ವಿಯಾಗಬೇಕೆಂದು ಮಕ್ಕಳಿಗೆ ಮನವರಿಕೆ ಮಾಡಿದರು . ಸಂಸ್ಕೃತ ವಿದ್ವಾನ್ ಸುಬ್ರಹ್ಮಣ್ಯ ಭಟ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು . ರಸ್ತೆ ಸುರಕ್ಷತೆಯ ಜಾಗೃತಿಯ ಕುರಿತು ಶಾಲಾ ಶಿಕ್ಷಕಿ ಶ್ರೀಮತಿ ಪ್ರಭಾವತಿಯವರು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿ , ರಸ್ತೆ ನಿಯಮದ ಪ್ರತಿಜ್ಞಾವಿಧಿಯನ್ನು ತೆಗೆದುಕೊಳ್ಳಲಾಯಿತು . ಕಲಾ ಶಿಕ್ಷಕಿ ಶ್ರೀಮತಿ ಗೀತಾ ರವರು ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ವನಿತಾ ರವರು ಹಾಗೂ ಚಿತ್ರಕಲಾ ಶಿಕ್ಷಕರಾದ ಶ್ರೀ ಧನಂಜಯ್ . ಬಿ ಅವರು ವಂದನಾರ್ಪಣೆಗೈದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…