ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಮನೋವಿಕಸನದ ದೃಷ್ಟಿಯಿಂದ ಎನ್. ಐ .ಟಿ .ಕೆ . ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 1/4/2024 ರಿಂದ 6/4/2024 ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಮನೋವಿಕಸನದ ದೃಷ್ಟಿಯಿಂದ ಎನ್. ಐ .ಟಿ .ಕೆ . ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 1/4/2024 ರಿಂದ 6/4/2024 ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿ ಕೆ .ಆರ್ .ಇ .ಸಿ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ , ಶ್ರೀಮತಿ ಲತಾ , ಶಾಲಾ ಪ್ರಾಂಶುಪಾಲೆ ಶ್ರೀಮತಿ ಪ್ರಮೀಳ ಹಾಗೂ ಹಿರಿಯ ಪ್ರಾಧ್ಯಾಪಕರಾದ ಶ್ರೀ ಸುಬ್ರಮಣ್ಯ ಭಟ್ ದೀಪ ಪ್ರಜ್ವಲನೆ ನೆರವೇರಿಸುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿ ಶ್ರೀಮತಿ ಲತಾ ರವರು ಮಕ್ಕಳಿಗೆ ಪ್ರೋತ್ಸಾಹಕ ಮಾತುಗಳನ್ನಾಡುವ ಮೂಲಕ ಕ್ರಿಯಾತ್ಮಕವಾಗಿ ಭಾಗವಹಿಸಲು ಹುರಿದುಂಬಿಸಿದರು . ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸಿಕ್ಕಂತಹ ಅವಕಾಶವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳುವ ಮೂಲಕ ಮಕ್ಕಳಲ್ಲಿ ಸೃಜನಾತ್ಮಕ ಪ್ರತಿಭೆಯನ್ನು ಹೊರ ತರುವಲ್ಲಿ ಯಶಸ್ವಿಯಾಗಬೇಕೆಂದು ಮಕ್ಕಳಿಗೆ ಮನವರಿಕೆ ಮಾಡಿದರು . ಸಂಸ್ಕೃತ ವಿದ್ವಾನ್ ಸುಬ್ರಹ್ಮಣ್ಯ ಭಟ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು . ರಸ್ತೆ ಸುರಕ್ಷತೆಯ ಜಾಗೃತಿಯ ಕುರಿತು ಶಾಲಾ ಶಿಕ್ಷಕಿ ಶ್ರೀಮತಿ ಪ್ರಭಾವತಿಯವರು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿ , ರಸ್ತೆ ನಿಯಮದ ಪ್ರತಿಜ್ಞಾವಿಧಿಯನ್ನು ತೆಗೆದುಕೊಳ್ಳಲಾಯಿತು . ಕಲಾ ಶಿಕ್ಷಕಿ ಶ್ರೀಮತಿ ಗೀತಾ ರವರು ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ವನಿತಾ ರವರು ಹಾಗೂ ಚಿತ್ರಕಲಾ ಶಿಕ್ಷಕರಾದ ಶ್ರೀ ಧನಂಜಯ್ . ಬಿ ಅವರು ವಂದನಾರ್ಪಣೆಗೈದರು.
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…