ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿಯ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಮೂರನೇ ಶಾಖೆಯು ಕಿನ್ನಿಗೋಳಿ ಬೆತ್ಲೇಮ್ ಸ್ಟಾರ್ ಕಾಂಪ್ಲೇಕ್ಸ್ ನಲ್ಲಿ ಆರಂಭ

ಮುಲ್ಕಿ; ಹಳೆಯಂಗಡಿಯ ಸಹಕಾರಿ ಭೀಷ್ಮ ದಿ. ಎಚ್ ನಾರಾಯಣ ಸನಿಲ್ ಮತ್ತು ಸಹಕಾರಿ ಧುರೀಣ ದಿ.ಪಂಜದಗುತ್ತುಶಾಂತರಾಮ ಶೆಟ್ಟಿರವರ ಪ್ರೇರಣಾ ಶಕ್ತಿಯಿಂದಾಗಿ ಪ್ರಾರಂಭಗೊಂಡ ಹಳೆಯಂಗಡಿಯ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಮೂರನೇ ಶಾಖೆಯು ಕಿನ್ನಿಗೋಳಿ ಬೆತ್ಲೇಮ್ ಸ್ಟಾರ್ ಕಾಂಪ್ಲೇಕ್ಸ್ ನಲ್ಲಿ ಮಾರ್ಚ್‌ ಪ್ರಾರಂಭಗೊಂಡಿತು.


ನೂತನ ಸೊಸೈಟಿಯ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿ. ಬೆಂಗಳೂರು, ಹಾಗೂ ದ. ಕ. ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರಕುಮಾರ್ ನೆರವೇರಿಸಿ ಮಾತನಾಡಿ
ಹಳೆ ಅಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ಅಧ್ಯಕ್ಷರಾದ ವಸಂತ್ ಬೆರ್ನಾಡ್ ನೇತೃತ್ವದಲ್ಲಿ
ಪ್ರಥಮ ವರ್ಷದಲ್ಲೇ ಲಾಭ
ಎರಡು ಜಿಲ್ಲೆಯಲ್ಲಿ ವ್ಯವಹಾರ ಮಾಡುವ ಅವಕಾಶ
ಹವಾನಿಯಂತ್ರಿತ ವ್ಯವಸ್ಥೆ,
ಗ್ರಾಹಕರಿಗೆ ಉತ್ತಮ ಅವಕಾಶದ ಮೂಲಕ ಅದ್ಭುತ ಸಾಧನೆ ಮಾಡಿದೆ ಎಂದು ಹೇಳಿದ ಅವರು ಸಹಕಾರ ಚಳುವಳಿಗೆ ತನ್ನ ಬೆಂಬಲ ಸದಾ ಇದೆ ಎಂದು ಹೇಳಿ ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಗೆ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ವತಿಯಿಂದ 5 ಲಕ್ಷ ಬಹುಮಾನ ಘೋಷಿಸಿದರು.
ಮಾಜಿ ಸಚಿವ ಕೆ. ಅಭಯಚಂದ್ರರವರು ದೀಪ ಪ್ರಜ್ವಲನೆ ಮಾಡಿ ಶುಭ ಹಾರೈಸಿ ಸೊಸೈಟಿಯು ಬಡವರ ಅಸಹಾಯಕರ ಧ್ವನಿಯಾಗಿ 50 ಶಾಖೆ ತೆರೆಯಲಿ ಎಂದರು


ಸೊಸೈಟಿಯ ಭದ್ರತಾಕೊಠಡಿ ಉದ್ಘಾಟನೆ ಹಾಗೂ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮುಲ್ಕಿ ಸೀಮೆ ಅರಸರಾದ ಎಂ. ದುಗ್ಗಣ್ಣ ಸಾವಂತರು ವಹಿಸಿ ಮಾತನಾಡಿ ಪ್ರಿಯದರ್ಶಿನಿ ಸೊಸೈಟಿಯು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಕಾರ್ಯ ಅಭಿನಂದನೀ ಯವಾಗಿದ್ದು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸವಲತ್ತುಗಳು ದೊರೆಯಲು ಸೊಸೈಟಿಯು ನಡೆಸುತ್ತಿರುವ ಪ್ರಾಮಾಣಿಕ ಪ್ರಯತ್ನ ಯಶಸ್ವಿಯಾಗಲಿ ಎಂದರು.


ವೇದಿಕೆಯಲ್ಲಿ ಪ್ರಿಯದರ್ಶಿನಿ ಸ್ವಸಹಾಯ ಗುಂಪಿಗೆ ಚಾಲನೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ ರೈರವರು, ಅಮೃತ ನಗದು ಪತ್ರಠೇವಣಿ ಬಿಡುಗಡೆಯನ್ನು ಕಿನ್ನಿಗೋಳಿಯ ಕೊಸೆಸಾಂವ್‌ ಅಮ್ಮನವರ ಚರ್ಚ್ ನ ಧರ್ಮ ಗುರುಗಳಾದ ಫಾ| ಫಾವುಸ್ತಿನ್ ಲುಕಾಸ್ ಲೋಬೋ ರವರು,ಠೇವಣಿ ಪತ್ರ ಬಿಡುಗಡೆಯನ್ನು ದುರ್ಗಾದಯ ಕಿನ್ನಿಗೋಳಿಯ ಮಾಲಕ ಸೀತಾರಾಮ ಶೆಟ್ಟಿಯವರು, ಉಳಿತಾಯ ಖಾತೆಯ ಪಾಸ್‌ಬುಕ್ ವಿತರಣೆಯನ್ನು,ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿ., ಬೆಂಗಳೂರುನ ನಿರ್ದೇಶಕ ಡಾ|| ಐಕಳಬಾವ ದೇವಿ ಪ್ರಸಾದ್ ಶೆಟ್ಟಿಯವರು, ಮಾಸಿಕ ಠೇವಣಿ ಪತ್ರ ಬಿಡುಗಡೆಯನ್ನು ಸಿ.ಎಸ್.ಐ ಅಮ್ಮನ್ ಮೆಮೊರಿಯಲ್‌ಚರ್ಚ್ ಹಳೆಯಂಗಡಿಯ ಸಭಾಪಾಲಕ ರೇಅಮೃತ್‌ರಾಜ್‌ಖೋಡೆರವರು, ಪ್ರಥಮ ವಾಹನ ಸಾಲ ವಿತರಣೆಯನ್ನು ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ. ಸೂರ್ಯಕುಮಾರ್‌ರವರು, ನಿತ್ಯನಿಧಿ ಪಾಸ್‌ಬುಕ್ ವಿತರಣೆಯನ್ನು ಲಯನ್‌ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್‌ ಡಿ ಸೋಜ ರವರು ನೆರವೇರಿಸಿ ಮಾತನಾಡಿ ಶುಭ ಹಾರೈಸಿದರು
ಮುಖ್ಯ ಅತಿಥಿಗಳಾಗಿ ಚಲನಚಿತ್ರ ನಟ ಭೋಜರಾಜ್ ವಾಮಂಜೂರ್,ಇನ್ನರ್ ವಿಲ್ ಕ್ಲಬ್ ಕಿನ್ನಿಗೋಳಿಯ ಅಧ್ಯಕ್ಷ ಸವಿತಾ ಶೆಟ್ಟಿ, ಖಲಿರಿಯಾಜುಮ್ಮಾ ಮಸೀದಿ ಗುತ್ತಕಾಡುನ ಅಧ್ಯಕ್ಷ ಅಬೂಬಕ್ಕರ್‌, ಕಿನ್ನಿಗೋಳಿ ಧರ್ಮಕೇಂದ್ರ – ಪಾಲನಾ ಮಂಡಳಿ ಉಪಾಧ್ಯಕ್ಷ ವಿಲಿಯಂ ಡಿಸೋಜ, ಎ.ಪಿ.ಎಮ್.ಸಿ ಮಾಜಿ ಅಧ್ಯಕ್ಷ ಪ್ರಮೋದ್‌ ಕುಮಾರ್‌,ಜಿ ಪಂ ಮಾಜೀ ಸದಸ್ಯೆ ಶೈಲಾ ಸಿಕ್ವೇರಾ, ಕಿನ್ನಿಗೋಳಿ ಗ್ರಾ ಪಂನ ಮಾಜೀ ಅಧ್ಯಕ್ಷ ಟಿ. ಎಚ್ ಮಯ್ಯದ್ದಿ,, ದ.ಕ. ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾದ ಜಯಂತಿ, ಕಾಳಿಕಾಂಬ ಜ್ಯುವೆಲರ್ಸ್‌ ಮಾಲಕ ಯೋಗೀಶ್‌ ಆಚಾರ್ಯ, ಬೆತ್ಲೇಮ್ ಸ್ಟಾರ್‌ ಕಾಂಪ್ಲೇಕ್ಸ್‌ ಮಾಲಕ ಕೆ. ದೀಪಕ್ ಎ. ರೊಡ್ರಿಗಸ್‌ರವರು, ಕಟ್ಟಡದ ಮಾಲೀಕ ಗೋಪಾಲಕೃಷ್ಣ
ಸೊಸೈಟಿಯ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್, ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ,ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ನಿರ್ದೇಶಕರಾದ ಡಾ.ಗಣೇಶ್‌ ಅಮೀನ್ ಸಂಕಮಾರ್, ಗೌತಮ್‌ಜೈನ್, ಶೆರಿಲ್ ಆಯೋನ ಉಮಾನಾಥ್‌ ಜೆ ಶೆಟ್ಟಿಗಾರ್, ಜಯಕೃಷ್ಣ ಕೋಟ್ಯಾನ್,ಹರೀಶ್ ಎನ್ ಪುತ್ರನ್,ಸಂದೀಪ್,
ಗಣೇಶ್ ಪ್ರಸಾದ್‌ ದೇವಾಡಿಗ, ತನುಜಾ ಶೆಟ್ಟಿ, ವಿಜಯಕುಮಾರ್ ಸನಿಲ್, ಮಿರ್ಜಾಅಹಮ್ಮದ್, ನವೀನ್ ಸಾಲ್ಯಾನ್‌ ಮತ್ತಿತರರು ಉಪಸ್ಥಿತರಿದ್ದರು.
ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಸ್ವಾಗತಿಸಿದರು.ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಧನ್ಯವಾದ ಅರ್ಪಿಸಿದರು. ಪ್ರಕಾಶ್ ಆಚಾರ್ಯ, ಅಕ್ಷತಾ ಶೆಟ್ಟಿ ನಿರೂಪಿಸಿದರು

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!