ಇತರೆ

ಹಳೆಯಂಗಡಿಯ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಮೂರನೇ ಶಾಖೆಯು ಕಿನ್ನಿಗೋಳಿ ಬೆತ್ಲೇಮ್ ಸ್ಟಾರ್ ಕಾಂಪ್ಲೇಕ್ಸ್ ನಲ್ಲಿ ಆರಂಭ

ಮುಲ್ಕಿ; ಹಳೆಯಂಗಡಿಯ ಸಹಕಾರಿ ಭೀಷ್ಮ ದಿ. ಎಚ್ ನಾರಾಯಣ ಸನಿಲ್ ಮತ್ತು ಸಹಕಾರಿ ಧುರೀಣ ದಿ.ಪಂಜದಗುತ್ತುಶಾಂತರಾಮ ಶೆಟ್ಟಿರವರ ಪ್ರೇರಣಾ ಶಕ್ತಿಯಿಂದಾಗಿ ಪ್ರಾರಂಭಗೊಂಡ ಹಳೆಯಂಗಡಿಯ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಮೂರನೇ ಶಾಖೆಯು ಕಿನ್ನಿಗೋಳಿ ಬೆತ್ಲೇಮ್ ಸ್ಟಾರ್ ಕಾಂಪ್ಲೇಕ್ಸ್ ನಲ್ಲಿ ಮಾರ್ಚ್‌ ಪ್ರಾರಂಭಗೊಂಡಿತು.


ನೂತನ ಸೊಸೈಟಿಯ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿ. ಬೆಂಗಳೂರು, ಹಾಗೂ ದ. ಕ. ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರಕುಮಾರ್ ನೆರವೇರಿಸಿ ಮಾತನಾಡಿ
ಹಳೆ ಅಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ಅಧ್ಯಕ್ಷರಾದ ವಸಂತ್ ಬೆರ್ನಾಡ್ ನೇತೃತ್ವದಲ್ಲಿ
ಪ್ರಥಮ ವರ್ಷದಲ್ಲೇ ಲಾಭ
ಎರಡು ಜಿಲ್ಲೆಯಲ್ಲಿ ವ್ಯವಹಾರ ಮಾಡುವ ಅವಕಾಶ
ಹವಾನಿಯಂತ್ರಿತ ವ್ಯವಸ್ಥೆ,
ಗ್ರಾಹಕರಿಗೆ ಉತ್ತಮ ಅವಕಾಶದ ಮೂಲಕ ಅದ್ಭುತ ಸಾಧನೆ ಮಾಡಿದೆ ಎಂದು ಹೇಳಿದ ಅವರು ಸಹಕಾರ ಚಳುವಳಿಗೆ ತನ್ನ ಬೆಂಬಲ ಸದಾ ಇದೆ ಎಂದು ಹೇಳಿ ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಗೆ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ವತಿಯಿಂದ 5 ಲಕ್ಷ ಬಹುಮಾನ ಘೋಷಿಸಿದರು.
ಮಾಜಿ ಸಚಿವ ಕೆ. ಅಭಯಚಂದ್ರರವರು ದೀಪ ಪ್ರಜ್ವಲನೆ ಮಾಡಿ ಶುಭ ಹಾರೈಸಿ ಸೊಸೈಟಿಯು ಬಡವರ ಅಸಹಾಯಕರ ಧ್ವನಿಯಾಗಿ 50 ಶಾಖೆ ತೆರೆಯಲಿ ಎಂದರು


ಸೊಸೈಟಿಯ ಭದ್ರತಾಕೊಠಡಿ ಉದ್ಘಾಟನೆ ಹಾಗೂ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮುಲ್ಕಿ ಸೀಮೆ ಅರಸರಾದ ಎಂ. ದುಗ್ಗಣ್ಣ ಸಾವಂತರು ವಹಿಸಿ ಮಾತನಾಡಿ ಪ್ರಿಯದರ್ಶಿನಿ ಸೊಸೈಟಿಯು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಕಾರ್ಯ ಅಭಿನಂದನೀ ಯವಾಗಿದ್ದು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸವಲತ್ತುಗಳು ದೊರೆಯಲು ಸೊಸೈಟಿಯು ನಡೆಸುತ್ತಿರುವ ಪ್ರಾಮಾಣಿಕ ಪ್ರಯತ್ನ ಯಶಸ್ವಿಯಾಗಲಿ ಎಂದರು.


ವೇದಿಕೆಯಲ್ಲಿ ಪ್ರಿಯದರ್ಶಿನಿ ಸ್ವಸಹಾಯ ಗುಂಪಿಗೆ ಚಾಲನೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ ರೈರವರು, ಅಮೃತ ನಗದು ಪತ್ರಠೇವಣಿ ಬಿಡುಗಡೆಯನ್ನು ಕಿನ್ನಿಗೋಳಿಯ ಕೊಸೆಸಾಂವ್‌ ಅಮ್ಮನವರ ಚರ್ಚ್ ನ ಧರ್ಮ ಗುರುಗಳಾದ ಫಾ| ಫಾವುಸ್ತಿನ್ ಲುಕಾಸ್ ಲೋಬೋ ರವರು,ಠೇವಣಿ ಪತ್ರ ಬಿಡುಗಡೆಯನ್ನು ದುರ್ಗಾದಯ ಕಿನ್ನಿಗೋಳಿಯ ಮಾಲಕ ಸೀತಾರಾಮ ಶೆಟ್ಟಿಯವರು, ಉಳಿತಾಯ ಖಾತೆಯ ಪಾಸ್‌ಬುಕ್ ವಿತರಣೆಯನ್ನು,ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿ., ಬೆಂಗಳೂರುನ ನಿರ್ದೇಶಕ ಡಾ|| ಐಕಳಬಾವ ದೇವಿ ಪ್ರಸಾದ್ ಶೆಟ್ಟಿಯವರು, ಮಾಸಿಕ ಠೇವಣಿ ಪತ್ರ ಬಿಡುಗಡೆಯನ್ನು ಸಿ.ಎಸ್.ಐ ಅಮ್ಮನ್ ಮೆಮೊರಿಯಲ್‌ಚರ್ಚ್ ಹಳೆಯಂಗಡಿಯ ಸಭಾಪಾಲಕ ರೇಅಮೃತ್‌ರಾಜ್‌ಖೋಡೆರವರು, ಪ್ರಥಮ ವಾಹನ ಸಾಲ ವಿತರಣೆಯನ್ನು ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ. ಸೂರ್ಯಕುಮಾರ್‌ರವರು, ನಿತ್ಯನಿಧಿ ಪಾಸ್‌ಬುಕ್ ವಿತರಣೆಯನ್ನು ಲಯನ್‌ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್‌ ಡಿ ಸೋಜ ರವರು ನೆರವೇರಿಸಿ ಮಾತನಾಡಿ ಶುಭ ಹಾರೈಸಿದರು
ಮುಖ್ಯ ಅತಿಥಿಗಳಾಗಿ ಚಲನಚಿತ್ರ ನಟ ಭೋಜರಾಜ್ ವಾಮಂಜೂರ್,ಇನ್ನರ್ ವಿಲ್ ಕ್ಲಬ್ ಕಿನ್ನಿಗೋಳಿಯ ಅಧ್ಯಕ್ಷ ಸವಿತಾ ಶೆಟ್ಟಿ, ಖಲಿರಿಯಾಜುಮ್ಮಾ ಮಸೀದಿ ಗುತ್ತಕಾಡುನ ಅಧ್ಯಕ್ಷ ಅಬೂಬಕ್ಕರ್‌, ಕಿನ್ನಿಗೋಳಿ ಧರ್ಮಕೇಂದ್ರ – ಪಾಲನಾ ಮಂಡಳಿ ಉಪಾಧ್ಯಕ್ಷ ವಿಲಿಯಂ ಡಿಸೋಜ, ಎ.ಪಿ.ಎಮ್.ಸಿ ಮಾಜಿ ಅಧ್ಯಕ್ಷ ಪ್ರಮೋದ್‌ ಕುಮಾರ್‌,ಜಿ ಪಂ ಮಾಜೀ ಸದಸ್ಯೆ ಶೈಲಾ ಸಿಕ್ವೇರಾ, ಕಿನ್ನಿಗೋಳಿ ಗ್ರಾ ಪಂನ ಮಾಜೀ ಅಧ್ಯಕ್ಷ ಟಿ. ಎಚ್ ಮಯ್ಯದ್ದಿ,, ದ.ಕ. ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾದ ಜಯಂತಿ, ಕಾಳಿಕಾಂಬ ಜ್ಯುವೆಲರ್ಸ್‌ ಮಾಲಕ ಯೋಗೀಶ್‌ ಆಚಾರ್ಯ, ಬೆತ್ಲೇಮ್ ಸ್ಟಾರ್‌ ಕಾಂಪ್ಲೇಕ್ಸ್‌ ಮಾಲಕ ಕೆ. ದೀಪಕ್ ಎ. ರೊಡ್ರಿಗಸ್‌ರವರು, ಕಟ್ಟಡದ ಮಾಲೀಕ ಗೋಪಾಲಕೃಷ್ಣ
ಸೊಸೈಟಿಯ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್, ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ,ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ನಿರ್ದೇಶಕರಾದ ಡಾ.ಗಣೇಶ್‌ ಅಮೀನ್ ಸಂಕಮಾರ್, ಗೌತಮ್‌ಜೈನ್, ಶೆರಿಲ್ ಆಯೋನ ಉಮಾನಾಥ್‌ ಜೆ ಶೆಟ್ಟಿಗಾರ್, ಜಯಕೃಷ್ಣ ಕೋಟ್ಯಾನ್,ಹರೀಶ್ ಎನ್ ಪುತ್ರನ್,ಸಂದೀಪ್,
ಗಣೇಶ್ ಪ್ರಸಾದ್‌ ದೇವಾಡಿಗ, ತನುಜಾ ಶೆಟ್ಟಿ, ವಿಜಯಕುಮಾರ್ ಸನಿಲ್, ಮಿರ್ಜಾಅಹಮ್ಮದ್, ನವೀನ್ ಸಾಲ್ಯಾನ್‌ ಮತ್ತಿತರರು ಉಪಸ್ಥಿತರಿದ್ದರು.
ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಸ್ವಾಗತಿಸಿದರು.ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಧನ್ಯವಾದ ಅರ್ಪಿಸಿದರು. ಪ್ರಕಾಶ್ ಆಚಾರ್ಯ, ಅಕ್ಷತಾ ಶೆಟ್ಟಿ ನಿರೂಪಿಸಿದರು

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

3 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

3 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

3 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

3 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

3 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

3 days ago