ಇತರೆ

ಬಂದೂಕು ಠೇವಣಿ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ದತೆ

ಚುನಾವಣಾ ಸಮಯದಲ್ಲಿ ರೈತರ ಪರವಾನಗಿ ಇರುವ ಬಂದೂಕುಗಳನ್ನು ಠಾಣೆಗಳಲ್ಲಿ ಠೇವಣಿ ಇಡುವುದರಿಂದ ವಿನಾಯಿತಿ ನೀಡಬೇಕೆಂದು ಸಂಬoಧಪಟ್ಟ ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ, ಇನ್ನು ಕಾನೂನು ಹೋರಾಟವೊಂದೇ ದಾರಿ ಈ ಹಿನ್ನೆಲೆಯಲ್ಲಿ ಬಂದೂಕು ಹೊಂದಿರುವ ರೈತರ ಸಮಾಲೋಚನಾ ಸಭೆಯನ್ನು ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಕರೆಯಲಾಗಿದೆ ಎಂದು ರೈತ ಮುಖಂಡ ವಿಕ್ಟರ್ ಮಾರ್ಟಿಸ್ ಹೇಳಿದರು.

ಅಭಿಮತ ಕಡಬ
ಅವರು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಂದೂಕು ಠೇವಣಿ ಇಡುವ ವಿಚಾರದಲ್ಲಿ ರೈತರಿಗೆ ಇನ್ನಿಲ್ಲದ ಕಿರಿಕಿರಿ ನೀಡಲಾಗುತ್ತದೆ, ಕೃಷಿ ಹಾಗೂ ನಮ್ಮ ರಕ್ಷಣೆಗೆೆ ಇರುವ ಕೋವಿಯನ್ನು ಠೇವಣಿ ಇಡುವುದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದರೆ ಯಾವುದೇ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳಾಗಲಿ, ಸರಕಾರವಾಗಲಿ ನಮ್ಮ ಬೇಡಿಕೆಗೆ ಮನ್ನಣೆ ನೀಡುತ್ತಿಲ್ಲ. ಹಾಗಾಗಿ ಜಿಲ್ಲೆಯ ಎಲ್ಲಾ ಕೋವಿ ಬಳಕೆದಾರರನ್ನು ಒಗ್ಗೂಡಿಸಿ, ಸಮಿತಿ ರಚಿಸಿಕೊಂಡು ಉಚ್ಛ ನ್ಯಾಯಾಲಯದಲ್ಲಿ ಕಾನೂನು ಸಮರಕ್ಕೆ ಸಿದ್ದತೆ ನಡೆಸಲು ಸಭೆ ಕರೆಯಲಾಗಿದೆ ಎಂದು ಹೇಳಿದರು. ಕೇಂದ್ರ ಚುನಾವಣಾ ಆಯೋಗವೇನೋ ಕೋವಿಗಳನ್ನು ಠೇವಣಿ ಇಡಲು ಸೂಚನೆ ನೀಡಿದೆ. ಆದರೆ ರಾಜ್ಯ ಸರಕಾರ ಯಾಕೆ ಸಮ್ಮನಿದೆ, ಕನಿಷ್ಟ ಈ ಕಾನೂನಿನ ವಿರುದ್ಧ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ದಾವೆ ಹೂಡಿ ರಾಜ್ಯದ ರೈತ ಹಿತ ಕಾಯಬಹುದಿತ್ತು. ಆದರೆ ಅದರ ಬದಲು ರೈತರನ್ನು ದ್ವೇಷಿಗಳಂತೆ, ಉಗ್ರಗಾಮಗಳಂತೆ ನೋಡುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರಕಾರ ರೈತರ ಪರವಾಗಿ ಭಾಷಣ ಮಾಡಿದರೆ ಸಾಲದು, ಈ ನಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ಹುಡಕಬೇಕು, ಈ ವಿಚಾರದಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ, ಕೋವಿ ಠೇವಣಿಯಿಂದ ವಿನಾಯಿತಿ ನೀಡಬೆಕೆಂದು ಜಿಲ್ಲಾಡಳಿತಕ್ಕೆ ನೀಡಿದ ೩೦೭ ಅರ್ಜಿಗ ಪೈಕಿ ಕೇವಳ ಏಳು ಅರ್ಜಿಗಳನ್ನು ಮಾತ್ರ ಮಾನ್ಯ ಮಾಡಲಾಗಿದೆ. ಅಧಿಕಾರಿಗಳು ಹಾಗೂ ನಮ್ಮ ಸಮಯ ವ್ಯರ್ಥವಾಗಿರುವುದು ಬಿಟ್ಟರೆ ಯಾವುದೇ ಪ್ರಯೋಜನವಾಗಿಲ್ಲ. ಚುನಾವಣೆ ವೇಳೆ ಅಷ್ಟೊಂದು ಪೋಲೀಸ್ ಪೋರ‍್ಸ್ ಇರುವಾಗ ನಮ್ಮ ಕೋವಿಯನ್ನು ಯಾಕೆ ಠೇವಣಿ ಇಡುವುದರಿಂದ ಪೋಲೀಸ್ ಇಲಾಖೆಯಲ್ಲಿ ವೈಫಲ್ಯ ಇದೆ ಎಂದು ಅನುಮಾನ ಮೂಡುತ್ತದೆ. ಹಿಂದೆ ಕೋವಿ ಪರವಾನಗಿ ಅಥವಾ ಅದರ ನವೀಕರಣಕ್ಕೆ ಯಾವುದೇ ಶುಲ್ಕವಿರಲಿಲ್ಲ. ಆದರೆ ಈಗ ೨೫೦೦ ರೂ ಪಾವತಿ ಮಾಡಬೇಕು ತಪ್ಪಿದರೆ ಮತ್ತಷ್ಟು ದಂಢ ವಿಧಿಸಲಾಗುತ್ತದೆ, ನಿಮ್ಮ ಖಜಾನೆ ತುಂಬಲು ರೈತರ ಬಂದೂಕಿನ ದುಡ್ಡು ಬೇಕಾ ಎನ್ನುವ ಪ್ರಶ್ನೆ ಬರುತ್ತದೆ. ಕೋವಿ ಠೇವನಾತಿಯ ವಿನಾಯಿತಿ ವಿಚಾರದಲ್ಲಿ ಸ್ಕ್ರೀನ್ oಗ್ ಕಮಿಟಿ ಯಲ್ಲಿ ಪ್ರಗತಿಪರ ಕ್ರಷಿಕರನ್ನು , ಚಿಂತಕರನ್ನು, ಬುದ್ದಿಜೀವಿಗಳನ್ನು ಸೇರಿಸಬೇಕು ಎನ್ನುವುದು ನಮ್ಮ ಅಗ್ರಹವಾಗಿದೆ ಎಂದು ಹೇಳಿದ ವಿಕ್ಟರ್ ಮಾರ್ಟಿಸ್ ಕಡಬದ ಅಂಬೇಡ್ಕರ್ ಭವನವನ್ನು ರೈತರ ಸಭೆ ನಡೆಸಲು ಉಚಿತವಾಗಿ ನೀಡಬೇಕು ಎಂದು ಅಗ್ರಹಿಸಿದರು.
ಈಲ್ಲಾ ಪಮಚಾಯಿತಿ ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ ಮಾತನಾಡಿ ಕೊಡುಗು ಹಾಗೂ ಕೇರಳದಲ್ಲಿ ಚುನಾವಣೆ ಸಂದರ್ಭದಲ್ಲಿ ಕೋವಿ ಠೇವಣಿ ಇಡುವ ಕಾನೂನು ಇಲ್ಲ, ನಮ್ಮಲ್ಲಿ ಅನಗತ್ಯ ತೊಂದರೆ ನೀಡಲಾಗುತ್ತಿದೆ. ಈ ವಿಚಾರದಲ್ಲಿ ರೈತರೆಲ್ಲಾ ಒಗ್ಗಟ್ಟಾಗಿ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕುಂತೂರು ಪದವು ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಜೇಮ್ಸ್ ತೋಮಸ್ ವಿ.ಎಂ., ನಾಟಿ ವೈದ್ಯ ವಾಸುದೇವ ಇಡ್ಯಾಡಿ, ರೈತ ಮುಖಂಡರಾದ. ಉಮ್ಮರಬ್ಬ ಮುಳಾರ್, ಸಂತೋಷ್ ಉಳಿಪ್ಪು ಮತ್ತಿತರರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

7 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

7 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

1 week ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

1 week ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

1 week ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

1 week ago