ಇತರೆ

ಬಂದೂಕು ಠೇವಣಿ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ದತೆ

ಚುನಾವಣಾ ಸಮಯದಲ್ಲಿ ರೈತರ ಪರವಾನಗಿ ಇರುವ ಬಂದೂಕುಗಳನ್ನು ಠಾಣೆಗಳಲ್ಲಿ ಠೇವಣಿ ಇಡುವುದರಿಂದ ವಿನಾಯಿತಿ ನೀಡಬೇಕೆಂದು ಸಂಬoಧಪಟ್ಟ ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ, ಇನ್ನು ಕಾನೂನು ಹೋರಾಟವೊಂದೇ ದಾರಿ ಈ ಹಿನ್ನೆಲೆಯಲ್ಲಿ ಬಂದೂಕು ಹೊಂದಿರುವ ರೈತರ ಸಮಾಲೋಚನಾ ಸಭೆಯನ್ನು ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಕರೆಯಲಾಗಿದೆ ಎಂದು ರೈತ ಮುಖಂಡ ವಿಕ್ಟರ್ ಮಾರ್ಟಿಸ್ ಹೇಳಿದರು.

ಅಭಿಮತ ಕಡಬ
ಅವರು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಂದೂಕು ಠೇವಣಿ ಇಡುವ ವಿಚಾರದಲ್ಲಿ ರೈತರಿಗೆ ಇನ್ನಿಲ್ಲದ ಕಿರಿಕಿರಿ ನೀಡಲಾಗುತ್ತದೆ, ಕೃಷಿ ಹಾಗೂ ನಮ್ಮ ರಕ್ಷಣೆಗೆೆ ಇರುವ ಕೋವಿಯನ್ನು ಠೇವಣಿ ಇಡುವುದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದರೆ ಯಾವುದೇ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳಾಗಲಿ, ಸರಕಾರವಾಗಲಿ ನಮ್ಮ ಬೇಡಿಕೆಗೆ ಮನ್ನಣೆ ನೀಡುತ್ತಿಲ್ಲ. ಹಾಗಾಗಿ ಜಿಲ್ಲೆಯ ಎಲ್ಲಾ ಕೋವಿ ಬಳಕೆದಾರರನ್ನು ಒಗ್ಗೂಡಿಸಿ, ಸಮಿತಿ ರಚಿಸಿಕೊಂಡು ಉಚ್ಛ ನ್ಯಾಯಾಲಯದಲ್ಲಿ ಕಾನೂನು ಸಮರಕ್ಕೆ ಸಿದ್ದತೆ ನಡೆಸಲು ಸಭೆ ಕರೆಯಲಾಗಿದೆ ಎಂದು ಹೇಳಿದರು. ಕೇಂದ್ರ ಚುನಾವಣಾ ಆಯೋಗವೇನೋ ಕೋವಿಗಳನ್ನು ಠೇವಣಿ ಇಡಲು ಸೂಚನೆ ನೀಡಿದೆ. ಆದರೆ ರಾಜ್ಯ ಸರಕಾರ ಯಾಕೆ ಸಮ್ಮನಿದೆ, ಕನಿಷ್ಟ ಈ ಕಾನೂನಿನ ವಿರುದ್ಧ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ದಾವೆ ಹೂಡಿ ರಾಜ್ಯದ ರೈತ ಹಿತ ಕಾಯಬಹುದಿತ್ತು. ಆದರೆ ಅದರ ಬದಲು ರೈತರನ್ನು ದ್ವೇಷಿಗಳಂತೆ, ಉಗ್ರಗಾಮಗಳಂತೆ ನೋಡುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರಕಾರ ರೈತರ ಪರವಾಗಿ ಭಾಷಣ ಮಾಡಿದರೆ ಸಾಲದು, ಈ ನಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ಹುಡಕಬೇಕು, ಈ ವಿಚಾರದಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ, ಕೋವಿ ಠೇವಣಿಯಿಂದ ವಿನಾಯಿತಿ ನೀಡಬೆಕೆಂದು ಜಿಲ್ಲಾಡಳಿತಕ್ಕೆ ನೀಡಿದ ೩೦೭ ಅರ್ಜಿಗ ಪೈಕಿ ಕೇವಳ ಏಳು ಅರ್ಜಿಗಳನ್ನು ಮಾತ್ರ ಮಾನ್ಯ ಮಾಡಲಾಗಿದೆ. ಅಧಿಕಾರಿಗಳು ಹಾಗೂ ನಮ್ಮ ಸಮಯ ವ್ಯರ್ಥವಾಗಿರುವುದು ಬಿಟ್ಟರೆ ಯಾವುದೇ ಪ್ರಯೋಜನವಾಗಿಲ್ಲ. ಚುನಾವಣೆ ವೇಳೆ ಅಷ್ಟೊಂದು ಪೋಲೀಸ್ ಪೋರ‍್ಸ್ ಇರುವಾಗ ನಮ್ಮ ಕೋವಿಯನ್ನು ಯಾಕೆ ಠೇವಣಿ ಇಡುವುದರಿಂದ ಪೋಲೀಸ್ ಇಲಾಖೆಯಲ್ಲಿ ವೈಫಲ್ಯ ಇದೆ ಎಂದು ಅನುಮಾನ ಮೂಡುತ್ತದೆ. ಹಿಂದೆ ಕೋವಿ ಪರವಾನಗಿ ಅಥವಾ ಅದರ ನವೀಕರಣಕ್ಕೆ ಯಾವುದೇ ಶುಲ್ಕವಿರಲಿಲ್ಲ. ಆದರೆ ಈಗ ೨೫೦೦ ರೂ ಪಾವತಿ ಮಾಡಬೇಕು ತಪ್ಪಿದರೆ ಮತ್ತಷ್ಟು ದಂಢ ವಿಧಿಸಲಾಗುತ್ತದೆ, ನಿಮ್ಮ ಖಜಾನೆ ತುಂಬಲು ರೈತರ ಬಂದೂಕಿನ ದುಡ್ಡು ಬೇಕಾ ಎನ್ನುವ ಪ್ರಶ್ನೆ ಬರುತ್ತದೆ. ಕೋವಿ ಠೇವನಾತಿಯ ವಿನಾಯಿತಿ ವಿಚಾರದಲ್ಲಿ ಸ್ಕ್ರೀನ್ oಗ್ ಕಮಿಟಿ ಯಲ್ಲಿ ಪ್ರಗತಿಪರ ಕ್ರಷಿಕರನ್ನು , ಚಿಂತಕರನ್ನು, ಬುದ್ದಿಜೀವಿಗಳನ್ನು ಸೇರಿಸಬೇಕು ಎನ್ನುವುದು ನಮ್ಮ ಅಗ್ರಹವಾಗಿದೆ ಎಂದು ಹೇಳಿದ ವಿಕ್ಟರ್ ಮಾರ್ಟಿಸ್ ಕಡಬದ ಅಂಬೇಡ್ಕರ್ ಭವನವನ್ನು ರೈತರ ಸಭೆ ನಡೆಸಲು ಉಚಿತವಾಗಿ ನೀಡಬೇಕು ಎಂದು ಅಗ್ರಹಿಸಿದರು.
ಈಲ್ಲಾ ಪಮಚಾಯಿತಿ ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ ಮಾತನಾಡಿ ಕೊಡುಗು ಹಾಗೂ ಕೇರಳದಲ್ಲಿ ಚುನಾವಣೆ ಸಂದರ್ಭದಲ್ಲಿ ಕೋವಿ ಠೇವಣಿ ಇಡುವ ಕಾನೂನು ಇಲ್ಲ, ನಮ್ಮಲ್ಲಿ ಅನಗತ್ಯ ತೊಂದರೆ ನೀಡಲಾಗುತ್ತಿದೆ. ಈ ವಿಚಾರದಲ್ಲಿ ರೈತರೆಲ್ಲಾ ಒಗ್ಗಟ್ಟಾಗಿ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕುಂತೂರು ಪದವು ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಜೇಮ್ಸ್ ತೋಮಸ್ ವಿ.ಎಂ., ನಾಟಿ ವೈದ್ಯ ವಾಸುದೇವ ಇಡ್ಯಾಡಿ, ರೈತ ಮುಖಂಡರಾದ. ಉಮ್ಮರಬ್ಬ ಮುಳಾರ್, ಸಂತೋಷ್ ಉಳಿಪ್ಪು ಮತ್ತಿತರರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

3 hours ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

3 hours ago

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…

3 hours ago

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

8 hours ago

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…

8 hours ago

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…

1 day ago