ಇತರೆ

ಮಹಿಳೆಯರನ್ನು ಹೀಯಾಳಿಸುವುದೇ ಕಾಂಗ್ರೆಸ್ ಸಂಸ್ಕೃತಿ: ಮಂಜುಳಾ ರಾವ್

ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ವಾಗ್ದಾಳಿ ಮಂಗಳೂರು: ಮಹಿಳಾ ಶಕ್ತಿಯನ್ನು ಅವಮಾನಿಸಿ ಅಗೌರವಿಸುವುದೇ ಕಾಂಗ್ರೆಸ್‌ ಸಂಸ್ಕೃತಿ ಎಂದು ಬಿಜೆಪಿ ಮಹಿಳಾ ಮೋರ್ಚಾ ವಾಗ್ದಾಳಿ ನಡೆಸಿದೆ.

ಇಂದು ಪಕ್ಷದ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಾವ್ ಅವರು, ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಸಚಿವ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಅವರ ಬಗ್ಗೆ ಆಡಿದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿದರು.

ಗಾಯತ್ರಿ ಸಿದ್ದೇಶ್ವರ ಅಡುಗೆ ಮಾಡುವುದಕ್ಕಷ್ಟೇ ಲಾಯಕ್ಕು ಎಂದು ಶಾಮನೂರು ಶಿವಶಂಕರಪ್ಪ ನೀಡಿದ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಕಾಂಗ್ರೆಸ್‌ ಸರಕಾರ ಬಂದಾಗಲೆಲ್ಲ ಮಹಿಳೆಯರಿಗೆ ಅವಮಾನ, ಅತ್ಯಾಚಾರದಂತಹ ಕೃತ್ಯಗಳು ಹೆಚ್ಚಾಗುತ್ತವೆ. ಅಂತಹ ದುರುಳರಿಗೆ ಕಾಂಗ್ರೆಸ್‌ ಸರಕಾರದ ಶ್ರೀರಕ್ಷೆ ಇರುವುದು ಇಂತಹ ಕೃತ್ಯಗಳು ಹೆಚ್ಚಲು ಕಾರಣ ಮಂಜುಳಾ ರಾವ್ ಹೇಳಿದರು.

ಮಹಿಳೆಯರು ಅಡುಗೆ ಮನೆಗೆ ಮಾತ್ರ ಸೀಮಿತವಾಗಿಲ್ಲ. ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರ ಮೀಸಲಾತಿ ನೀಡಿರುವುದು ಬಿಜೆಪಿ ಸರಕಾರ. ಹಿಂದೆ ವಿದೇಶಾಂಗ ಸಚಿವೆಯಾಗಿ ಅತ್ಯಂತ ಸಮರ್ಥವಾಗಿ ಕೆಲಸ ಮಾಡಿದವರು ಸುಷ್ಮಾ ಸ್ವರಾಜ್ ಬಿಜೆಪಿ ನಾಯಕಿಯಾಗಿದ್ದರು. ಅತ್ಯಂತ ಹಿಂದುಳಿದ ಬುಡಕಟ್ಟು ಸಮುದಾಯಕ್ಕೆ ಮಹಿಳೆಯೊಬ್ಬರನ್ನು ರಾಷ್ಟ್ರಪತಿ ಹುದ್ದೆಗೆ ಆಯ್ಕೆ ಮಾಡಿರುವುದು ಬಿಜೆಪಿ ಎಂದು ಈ ಸಸಂದರ್ಭದಲ್ಲಿ ಅವರು ನೆನಪಿಸಿದರು.

ಮಹಿಳೆಯರಿಗೆ ಬಿಜೆಪಿ ಉತ್ತಮ ಅವಕಾಶಗಳು ಮತ್ತು ಜವಾಬ್ದಾರಿಯನ್ನು ನೀಡಿದೆ. ಆದರೆ ಕಾಂಗ್ರೆಸ್‌ ಮಹಿಳೆಯನ್ನು ಅವಮಾನಿಸುತ್ತಿದೆ ಎಂದು ಅವರು ಹರಿಹಾಯ್ದರು.

ಕಾಂಗ್ರೆಸ್ ಸರಕಾರ ಗೃಹಲಕ್ಷ್ಮಿ ಹೆಸರಿನ ಯೋಜನೆ ತಂದಿದ್ದರೂ ಅದನ್ನು ಸಮರ್ಥವಾಗಿ ಜಾರಿ ಮಾಡಿಲ್ಲ. ಅಷ್ಟಕ್ಕೂ ಕುಟುಂಬದ ಪುರುಷರ ಆದಾಯಕ್ಕೇ ಕತ್ತರಿ ಹಾಕಿ ಅದನ್ನೇ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ ನೀಡಿ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ಸರಕಾರ ಎಂದು ಅವರು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್, ಉಪ ಮೇಯರ್ ಸುನೀತಾ,, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಕೋಶಾಧಿಕಾರಿ ಸುಮನ ಶರಣ್ ಹಾಗೂ ಅಶಿತಾ ಶೆಟ್ಟಿ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

7 hours ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

8 hours ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

9 hours ago

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…

12 hours ago

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…

12 hours ago

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…

12 hours ago