ಮಂಗಳೂರು: ಸುಭದ್ರ ಮತ್ತು ಸಮೃದ್ಧ ದೇಶವನ್ನು ಕಟ್ಟುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.
ವಕೀಲರ ಮಾತಿಗೆ ಸಮಾಜದಲ್ಲಿ ತೂಕ ಹೆಚ್ಚು. ಅವರ ಸಲಹೆಗಳನ್ನು ಮೀರುವ ವ್ಯಕ್ತಿಗಳು ಯಾರೂ ಇಲ್ಲ. ಭಾರತದ ಸ್ವಾತಂತ್ರ್ಯ ಹೋರಾಟ ಕಾಲದಲ್ಲಿ ಸಾವಿರಾರು ವಕೀಲರು ದಿಟ್ಟತನದಿಂದ ಕಾರ್ಯನಿರ್ವಹಿಸಿದ್ದರ ಫಲವಾಗಿಯೇ ಸ್ವಾತಂತ್ರ್ಯದ ಕಿಚ್ಚು ಎಲ್ಲೆಡೆ ಹಬ್ಬಿತು. ಆ ಬಳಿಕ ತುರ್ತು ಪರಿಸ್ಥಿತಿಯ ಸಂದದರ್ಭದಲ್ಲಿ ಸಂವಿಧಾನದ ಆಡಳಿತದ ಮರುಸ್ಥಾಪನೆಗೆ ನಡೆದ ಹೋರಾಟದಲ್ಲೂ ವಕೀಲರ ಸಮುದಾಯದ ಪಾತ್ರ ಮಹತ್ವದ್ದಾಗಿದೆ. ಅಂತೆಯೇ ಈಗ ಸ್ವತಂತ್ರ ಭಾರತ ಇನ್ನೊಂದು ಮಹತ್ವದ ಮಜಲಿನಲ್ಲಿ ಬಂದು ನಿಂತಿದೆ. ಮುಂದಿನ 25 ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ವಿಕಸಿತ ಭಾರತದ ಕನಸು ಕಾಣುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ವಕೀಲರ ಸಮುದಾಯ ತಮ್ಮ ಯೋಗದಾನವನ್ನು ನೀಡಬೇಕಿದೆ ಎಂದು ಪ್ರತಾಪ್ ಸಿಂಹ ನಾಯಕ್ ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಿ. ವೇದವ್ಯಾಸ ಕಾಮತ್, ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದಲ್ಲಿ ಆದ ಬದಲಾವಣೆಗಳು ಮತ್ತು ಅಭಿವೃದ್ಧಿಯ ಮಹಾ ಪರ್ವವನ್ನು ನೆನಪಿಸಿದರು. ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸುವ ಮೂಲಕ ದಿಟ್ಟ ನಿರ್ಧಾರ ಕೈಗೊಂಡ ಪ್ರಧಾನಿ ಮೋದಿ, ಒಂದು ಕಾಲದಲ್ಲಿ ಹೆಸರು ಕೇಳಿದರೆ ಭಯಪಡುತ್ತಿದ್ದಂತಹ ಕಾಶ್ಮೀರದಲ್ಲಿ ಇಂದು ಪ್ರವಾಸೋದ್ಯಮದ ಮೂಲಕ ಅಭಿವೃದ್ಧಿಯ ಹೊಸ ಅಲೆ ಎದ್ದಿರುವುದನ್ನು ನೆನಪಿಸಿದರು. ಕಲ್ಲು, ಬಾಂಬುಗಳನ್ನು ಎಸೆಯುತ್ತಿದ್ದ ಯುವಕರ ಮನಃ ಪರಿವರ್ತನೆ ಮಾಡಿ, ಅವರ ಕೈಗಳಿಗೆ ಲ್ಯಾಪ್ಟಾಪ್ ಕೊಟ್ಟು, ಬದುಕಿನ ಹೊಸ ದಾರಿಗೆ ಅವಕಾಶ ಮಾಡಿಕೊಟ್ಟವರು ಪ್ರಧಾನಿ ಮೋದಿ ಎಂದು ಶ್ಲಾಘಿಸಿದರು.
ಕೊರೊನಾ ಕಾಲದಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದು, ರಷ್ಯಾ-ಉಕ್ರೇನ್ ಯುದ್ಧ ಸಂದರ್ಭದಲ್ಲಿ ಭಾರತೀಯರ ಸುರಕ್ಷಿತ ತೆರವು ಕಾರ್ಯಾಚರಣೆಗಳನ್ನು ಅವರು ಸ್ಮರಿಸಿದರು.
ವಕೀಲರ ಸಮುದಾಯ ತಮ್ಮ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಅವರ ಕೈಬಲಪಡಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಹಿರಿಯರಾದ ಮೋನಪ್ಪ ಭಂಡಾರಿ ಅವರು ವಕೀಲರ ಸಮುದಾಯಕ್ಕೆ ಮಾರ್ಗದರ್ಶನ ಮಾಡಿದರು.
ಸುಭದ್ರ, ಬಲಿಷ್ಠ ಭಾರತ ಕಟ್ಟುವಲ್ಲಿ ವಕೀಲರ ಪಾತ್ರ ಮಹತ್ವದ್ದು: ಕ್ಯಾಪ್ಟನ್ ಬೃಜೇಶ್ ಚೌಟ
ಮಂಗಳೂರು: ಸುಭದ್ರ ಮತ್ತು ಸಮೃದ್ಧ ದೇಶವನ್ನು ಕಟ್ಟುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಲಿಷ್ಠ, ವಿಕಸಿತ ಭಾರತವನ್ನು ಕಟ್ಟಲು ವಕೀಲರ ಸಮುದಾಯ ಮಹತ್ವದ ಯೋಗದಾನ ನೀಡಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಹೇಳಿದರು.
ಅವರು ಬಿಜೆಪಿಯ ಜಿಲ್ಲಾ ಚುನಾವಣೆ ಕಾರ್ಯಾಲಯದಲ್ಲಿ ಸೋಮವಾರ ನಡೆದ ವಕೀಲರ ಪರಿಷತ್ ಸಭೆಯಲ್ಲಿ ಮಾತನಾಡಿದರು.
ವಕೀಲರು ಸಮಾಜದಲ್ಲಿ ಅತ್ಯಂತ ಗೌರವ ಮತ್ತು ಪ್ರತಿಷ್ಠೆಯನ್ನು ಹೊಂದಿದವರು. ಅವರ ಮಾತುಗಳನ್ನು ಯಾರೂ ಮೀರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಲ್ಲಿ ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ವಕೀಲರ ಸಮುದಾಯ ಕೈಜೋಡಿಸಬೇಕು ಎಂದು ಅವರು ಕರೆ ನಿಡಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಶಾಸಕ ಡಿ ವೇದವ್ಯಾಸ ಕಾಮತ್, ಹಿರಿಯರಾದ ಮೋನಪ್ಪ ಭಂಡಾರಿ, ಶಂಭು ಶರ್ಮಾ, ಸುಧಾಕರ ಜೋಶಿ, ಪ್ರಕೋಷ್ಠಗಳ ಜಿಲ್ಲಾ ಸಂಚಾಲಕ ಪ್ರಸನ್ನ ದರ್ಭೆ ಮುಂತಾದ ಅನೇಕ ಗಣ್ಯರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…