ಉಡುಪಿ: ನಗರದಲ್ಲಿ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿದ್ದು, ಬಿಸಿಲ ಧಗೆಯಿಂದ ಜನರು ಹೈರಣಾಗಿದ್ದಾರೆ.
ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದ್ದು, ಸಾರ್ವಜನಿಕರ ದಾಹ ತಣಿಸುವ ಉದ್ಧೇಶದಿಂದ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಹಾಗೂ ಜೋಸ್ ಆಲೂಕ್ಕಾಸ್ ಆಭರಣ ಮಳಿಗೆ ಜಂಟಿಯಾಗಿ ಮಾರುಥಿ ವೀಥಿಕಾದಲ್ಲಿ ಜಲ ಕುಟೀರ ಸ್ಥಾಪಿಸಿದೆ. ಇದರ ಉದ್ಘಾಟನಾ ಕಾರ್ಯಕ್ರಮವು ಇಂದು ನಡೆಯಿತು.
ಜಲಕುಟೀರವನ್ನು ಕಾನೂನು ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಶರ್ಮಿಳಾ ಎಸ್ ಹಾಗೂ ಪೌರಾಯುಕ್ತ ರಾಯಪ್ಪ ಅವರು ಅಯೋಧ್ಯೆಯಲ್ಲಿ ಬಾಲರಾಮನಿಗೆ ಅಭಿಷೇಕಕ್ಕೆ ಉಪಯೋಗಿಸಿದ ಬೆಳ್ಳಿಯ ಕಳಶದ ಮೂಲಕ ನೀರನ್ನು ಸಾರ್ವಜನಿಕರಿಗೆ ವಿತರಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಉಡುಪಿ ಜೋಸ್ ಆಲೂಕ್ಕಾಸ್ ಆಭರಣ ಮಳಿಗೆಯ ವ್ಯವಸ್ಥಾಪಕ ರಾಜೇಶ್ ಏನ್. ಆರ್, ಗೋಪಾಲ್, ಉದ್ಯಮಿ ಉದಯ ಕುಮಾರ್, ಮೊದಲಾದವರು ಉಪಸ್ಥಿತರಿದ್ದರು.
ಶುದ್ಧ ಕುಡಿಯುವ ನೀರನ್ನು, ಸದಾ ತಂಪಾಗಿಡುವ ಮೃತ್ತಿಕೆಯ ಹೂಜಿಯಲ್ಲಿ ಸಂಗ್ರಹಿಸಿಡಲಾಗುತ್ತದೆ. ಬಿಸಿಲಿನ ಧಗೆಯಿಂದ ಬಳಲಿದವರಿಗೆ ದಾಹ ತಣಿಸಲು ಇಲ್ಲಿಯ ಜಲಕುಟೀರದಿಂದ ಅನುಕೂಲವಾಗಲಿದೆ. ಈ ಯೋಜನೆ ಮಳೆಗಾಲ ಬರುವರೆಗೆ ಮುಂದುವರಿಯಲಿದೆ ಎಂದು ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ತಿಳಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…