ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಮನೋವಿಕಸನದ ದೃಷ್ಟಿಯಿಂದ ಎನ್. ಐ .ಟಿ .ಕೆ . ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿ ಕೆ .ಆರ್ .ಇ .ಸಿ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ , ಶ್ರೀಮತಿ ಲತಾ , ಶಾಲಾ ಪ್ರಾಂಶುಪಾಲೆ ಶ್ರೀಮತಿ ಪ್ರಮೀಳ ಹಾಗೂ ಹಿರಿಯ ಪ್ರಾಧ್ಯಾಪಕರಾದ ಶ್ರೀ ಸುಬ್ರಮಣ್ಯ ಭಟ್ ದೀಪ ಪ್ರಜ್ವಲನೆ ನೆರವೇರಿಸುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿ ಶ್ರೀಮತಿ ಲತಾ ರವರು ಮಕ್ಕಳಿಗೆ ಪ್ರೋತ್ಸಾಹಕ ಮಾತುಗಳನ್ನಾಡುವ ಮೂಲಕ ಕ್ರಿಯಾತ್ಮಕವಾಗಿ ಭಾಗವಹಿಸಲು ಹುರಿದುಂಬಿಸಿದರು . ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸಿಕ್ಕಂತಹ ಅವಕಾಶವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳುವ ಮೂಲಕ ಮಕ್ಕಳಲ್ಲಿ ಸೃಜನಾತ್ಮಕ ಪ್ರತಿಭೆಯನ್ನು ಹೊರ ತರುವಲ್ಲಿ ಯಶಸ್ವಿಯಾಗಬೇಕೆಂದು ಮಕ್ಕಳಿಗೆ ಮನವರಿಕೆ ಮಾಡಿದರು . ಸಂಸ್ಕೃತ ವಿದ್ವಾನ್ ಸುಬ್ರಹ್ಮಣ್ಯ ಭಟ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು . ರಸ್ತೆ ಸುರಕ್ಷತೆಯ ಜಾಗೃತಿಯ ಕುರಿತು ಶಾಲಾ ಶಿಕ್ಷಕಿ ಶ್ರೀಮತಿ ಪ್ರಭಾವತಿಯವರು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿ , ರಸ್ತೆ ನಿಯಮದ ಪ್ರತಿಜ್ಞಾವಿಧಿಯನ್ನು ತೆಗೆದುಕೊಳ್ಳಲಾಯಿತು . ಕಲಾ ಶಿಕ್ಷಕಿ ಶ್ರೀಮತಿ ಗೀತಾ ರವರು ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ವನಿತಾ ರವರು ಹಾಗೂ ಚಿತ್ರಕಲಾ ಶಿಕ್ಷಕರಾದ ಶ್ರೀ ಧನಂಜಯ್ . ಬಿ ಅವರು ವಂದನಾರ್ಪಣೆಗೈದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…