ಕರಾವಳಿ

ನಾನು ಮುಖ್ಯಮಂತ್ರಿ ಆಗಿರುವುದು, ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ: ಸಿ.ಎಂ.ಸಿದ್ದರಾಮಯ್ಯ ಪ್ರತಿಪಾದನೆ

ನಾನು ಮುಖ್ಯಮಂತ್ರಿ ಆಗಿರುವುದು, ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ: ಸಿ.ಎಂ.ಸಿದ್ದರಾಮಯ್ಯ ಪ್ರತಿಪಾದನೆ

ಬಿಜೆಪಿ ನಮ್ಮ ಈ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ

ಮೋದಿ ಅವರ ಅವಧಿಯಲ್ಲಿ ಇಡೀ ದೇಶದಲ್ಲಿ ಸ್ಕಾಲರ್ ಶಿಪ್ ಗೆ ಯಾವ ಗತಿ ಆಯ್ತು ಅಂತ ನೋಡಿದ್ದೀರಲ್ಲಾ?

ಈ ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ: ಸಿ.ಎಂ

ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ: ಬಿಜೆಪಿಗೆ ನೇರ ನೇರಾ ಎಚ್ಚರಿಸಿದ ಸಿ.ಎಂ.ಸಿದ್ದರಾಮಯ್ಯ

ಮೈಸೂರು : ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ನೇರ ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 45 ಕ್ಕೂ ಹೆಚ್ಚು ಮಂದಿ ಹೋಬಳಿ ಮಟ್ಟದ ಮುಖಂಡರುಗಳನ್ನು ಹಾಗೂ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ಆತ್ಮೀಯರು ಮತ್ತು ಸಂಬಂಧಿಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದರು.

ನಾನು ಮುಖ್ಯಮಂತ್ರಿ ಆಗಿರುವುದಕ್ಕೆ, ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರತಿಪಾದಿಸಿದರು.

ಬಿಜೆಪಿ ನಮ್ಮ ಈ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಈ ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ. ಆದ್ದರಿಂದ ನಾವೆಲ್ಲಾ ಉಳಿಯಬೇಕಾದರೆ ಸಂವಿಧಾನ ಉಳಿಯಬೇಕು. ಸಂವಿಧಾನ ಉಳಿಯಬೇಕು ಎಂದರೆ ಬಿಜೆಪಿ ಸೋಲಬೇಕು ಎನ್ನುವ ಪಣ ತೊಡಿ ಎಂದರು.

ಮೋದಿ ಅವರ ಅವಧಿಯಲ್ಲಿ ಇಡೀ ದೇಶದಲ್ಲಿ ಸ್ಕಾಲರ್ ಶಿಪ್ ಗೆ ಯಾವ ಗತಿ ಆಯ್ತು ಅಂತ ನೋಡಿದ್ದೀರಲ್ಲಾ? ಮತ್ತೇಕೆ ಬಿಜೆಪಿ ಕಡೆ ಮುಖ ಮಾಡಬೇಕು ಎಂದು ಪ್ರಶ್ನಿಸಿದರು.

ಶೂದ್ರರಿಗೆ BJP-RSS ನ ಗರ್ಭಗುಡಿಯೊಳಗೆ ಪ್ರವೇಶವೇ ಇಲ್ಲ: ಸಿ.ಎಂ.ಎಚ್ಚರಿಕೆ

ಶೂದ್ರರಿಗೆ BJP-RSS ನ ಗರ್ಭಗುಡಿಯೊಳಗೆ ಪ್ರವೇಶವೇ ಇಲ್ಲ. ಶೂದ್ರರು, ದಲಿತರನ್ನು ಕೇವಲಿ ಬಳಸಿಕೊಳ್ಳುತ್ತಾರೆ ಆದರೆ RSS ನ ಒಳಗೆ ಪ್ರವೇಶ ಕೊಡುವುದಿಲ್ಲ. ಆದ್ದರಿಂದ RSS ಕಡೆಗೆ ತಲೆ ಕೂಡ ಹಾಕಬೇಡಿ ಎಂದು ಕರೆ ನೀಡಿದರು.

ಮಂಡಲ್ ವರದಿ ವೇಳೆ ಶೂದ್ರರು ಸಾವಿಗೆ ಕಾರಣರಾದವರು ಇವರೇ ತಾನೇ?

ದಲಿತರು, ಶೂದ್ರರು, ಹಿಂದುಳಿದವರ ವಿರೋಧಿಯಾದ BJP-RSS ಮೀಸಲಾತಿಯನ್ನೂ ವಿರೋಧಿಸುತ್ತದೆ. ಮಂಡಲ್ ವರದಿ ವೇಳೆ ಶೂದ್ರರು ಸಾವಿಗೆ ಕಾರಣರಾದವರು, ನಮ್ಮವರು ಬೆಂಕಿ ಹಚ್ಚಿಕೊಂಡು ಸಾಯುವಂತೆ ಮಾಡಿದವರು ಇವರೇ ತಾನೇ? ನಮ್ಮ ಶತ್ರುಗಳ ಜತೆಗೆ ಈ ದೇಶದ ಶೂದ್ರರು, ದಲಿತರು, ಹಿಂದುಳಿದವರು ಏಕೆ ಹೋಗಬೇಕು ಎಂದು ಪ್ರಶ್ನಿಸಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಾನು ಹಿಂದುವಾಗಿ ಸಾಯುವುದಿಲ್ಲ ಎಂದು ಹೇಳಿ ಬೌದ್ದ ಧರ್ಮಕ್ಕೆ ಹೋಗಿದ್ದಕ್ಕೆ ಮುಖ್ಯ ಕಾರಣ ಜಾತಿ ಅಸಮಾನತೆ, ಮತ್ತು ಸಾಮಾಜಿಕ ಅಸಮಾನತೆಯೇ ಕಾರಣ ಎಂದರು.

ರಾಷ್ಟ್ರಮಟ್ಟದಲ್ಲೂ ನಮ್ಮ ಕಾರ್ಯಕ್ರಮ ಜಾರಿ

ಕೇಂದ್ರದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಕಡಿಮೆ ಇದೆ. ನಾವು ಅಧಿಕಾರಕ್ಕೆ ಬಂದರೆ ನಾವು ರಾಜ್ಯದಲ್ಲಿ ತಂದಿರುವ ದಲಿತ ಮತ್ತು ಹಿಂದುಳಿದ ವರ್ಗಗಳ ಪರವಾದ ಕಾನೂನುಗಳನ್ನು ರಾಷ್ಟ್ರಮಟ್ಟದಲ್ಲೂ ಜಾರಿಗೆ ತರಲಾಗುವುದು. ಈ ಬಗ್ಗೆ ರಾಹುಲ್ ಗಾಂಧಿ ಅವರ ಜತೆಗೂ ಮಾತಾಡಿ ಪ್ರಣಾಳಿಕೆಯಲ್ಲಿ ಸೇರಿಸಲು ಹೇಳಿದ್ದೇನೆ ಎಂದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…

2 hours ago

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…

2 hours ago

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

19 hours ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

19 hours ago

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…

19 hours ago

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

1 day ago