ಜನ ಮನದ ನಾಡಿ ಮಿಡಿತ

Advertisement

ನಾಯಿ ಬಾಯಿಯಿಂದ ರಕ್ಷಿಸಿದ ಮುಂಗುಸಿ ಅರಣ್ಯ ಇಲಾಖೆಗೆ ಹಸ್ತಾಂತರ

ಉಳ್ಳಾಲ: ನಾಯಿಯೊಂದು ಮರಿ ಮುಂಗುಸಿಯನ್ನು ಹಿಡಿದು ಎಳೆದಾಡಿ ಹಲ್ಲೆ ನಡೆಸಿರುವ ಘಟನೆ ಉಳ್ಳಾಲದ ಸೂರ್ಯಖಂಡದಲ್ಲಿ ಸಂಭವಿಸಿದ್ದು, ಸಮೀಪದ ಲೇಔಟ್ ಪ್ರಬಂಧಕರೊಬ್ಬರು ಅದಕ್ಕೆ ಶುಶ್ರೂಷೆ ನೀಡಿ ಅರಣ್ಯ ಇಲಾಖೆಗೆ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.

ಸೂರ್ಯಖಂಡ ನಿರ್ಮಾಣ ಹಂತದ ಲೇಔಟ್ ಪ್ರಬಂಧಕ ಪುಷ್ಪರಾಜ್ ಹರೇಕಳ, ಕರ್ತವ್ಯ ಸಂಬಂಧ ಸ್ಥಳದಲ್ಲಿದ್ದಾಗ, ನಾಯಿಯೊಂದು ಅಲ್ಲೇ ಸಮೀಪ ಮುಂಗುಸಿ ಮರಿಯನ್ನು ಓಡಿಸಿ ಹಿಡಿದು, ನಂತರ ನೆಲಕ್ಕಪ್ಪಳಿಸಿದೆ. ಇದರಿಂದ ಬಾಲ ಹಾಗೂ ತಲೆಗೆ ಗಂಭೀರ ಗಾಯಗೊಂಡ ಮುಂಗುಸಿ ಗಂಭೀರ ಸ್ಥಿತಿಯಲ್ಲಿತ್ತು. ತಕ್ಷಣ ಸ್ಥಳದಲ್ಲಿದ್ದ ಪುಷ್ಪರಾಜ್ ಅವರು ಮುಂಗುಸಿಗೆ ನೀರು ಹಾಯಿಸಿದ್ದು, ತುಂಡಾದ ಬಾಲಕ್ಕೆ ಶುಶ್ರೂಷೆಯನ್ನು ನೀಡಿದ್ದಾರೆ. ನಂತರ ಅರಣ್ಯ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಮಂಗಳೂರು ರೇಂಜಿನ ಬೀಟ್ ಆಫೀಸರ್ ಪ್ರವೀಣ್ ಹಾಗೂ ಅರಣ್ಯ ವೀಕ್ಷಕ ಅಭಿಜಿತ್ ಅವರು ಮುಂಗುಸಿಗೆ ಚಿಕಿತ್ಸೆ ನೀಡಿ ಮರಳಿ ಅರಣ್ಯಕ್ಕೆ ಬಿಡಲು ಕೊಂಡೊಯ್ದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!