ಜನ ಮನದ ನಾಡಿ ಮಿಡಿತ

Advertisement

ನಾಯಿ ಬಾಯಿಯಿಂದ ರಕ್ಷಿಸಿದ ಮುಂಗುಸಿ ಅರಣ್ಯ ಇಲಾಖೆಗೆ ಹಸ್ತಾಂತರ

ಉಳ್ಳಾಲ: ನಾಯಿಯೊಂದು ಮರಿ ಮುಂಗುಸಿಯನ್ನು ಹಿಡಿದು ಎಳೆದಾಡಿ ಹಲ್ಲೆ ನಡೆಸಿರುವ ಘಟನೆ ಉಳ್ಳಾಲದ ಸೂರ್ಯಖಂಡದಲ್ಲಿ ಸಂಭವಿಸಿದ್ದು, ಸಮೀಪದ ಲೇಔಟ್ ಪ್ರಬಂಧಕರೊಬ್ಬರು ಅದಕ್ಕೆ ಶುಶ್ರೂಷೆ ನೀಡಿ ಅರಣ್ಯ ಇಲಾಖೆಗೆ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.

ಸೂರ್ಯಖಂಡ ನಿರ್ಮಾಣ ಹಂತದ ಲೇಔಟ್ ಪ್ರಬಂಧಕ ಪುಷ್ಪರಾಜ್ ಹರೇಕಳ, ಕರ್ತವ್ಯ ಸಂಬಂಧ ಸ್ಥಳದಲ್ಲಿದ್ದಾಗ, ನಾಯಿಯೊಂದು ಅಲ್ಲೇ ಸಮೀಪ ಮುಂಗುಸಿ ಮರಿಯನ್ನು ಓಡಿಸಿ ಹಿಡಿದು, ನಂತರ ನೆಲಕ್ಕಪ್ಪಳಿಸಿದೆ. ಇದರಿಂದ ಬಾಲ ಹಾಗೂ ತಲೆಗೆ ಗಂಭೀರ ಗಾಯಗೊಂಡ ಮುಂಗುಸಿ ಗಂಭೀರ ಸ್ಥಿತಿಯಲ್ಲಿತ್ತು. ತಕ್ಷಣ ಸ್ಥಳದಲ್ಲಿದ್ದ ಪುಷ್ಪರಾಜ್ ಅವರು ಮುಂಗುಸಿಗೆ ನೀರು ಹಾಯಿಸಿದ್ದು, ತುಂಡಾದ ಬಾಲಕ್ಕೆ ಶುಶ್ರೂಷೆಯನ್ನು ನೀಡಿದ್ದಾರೆ. ನಂತರ ಅರಣ್ಯ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಮಂಗಳೂರು ರೇಂಜಿನ ಬೀಟ್ ಆಫೀಸರ್ ಪ್ರವೀಣ್ ಹಾಗೂ ಅರಣ್ಯ ವೀಕ್ಷಕ ಅಭಿಜಿತ್ ಅವರು ಮುಂಗುಸಿಗೆ ಚಿಕಿತ್ಸೆ ನೀಡಿ ಮರಳಿ ಅರಣ್ಯಕ್ಕೆ ಬಿಡಲು ಕೊಂಡೊಯ್ದಿದ್ದಾರೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!