ಉಳ್ಳಾಲ: ನಾಯಿಯೊಂದು ಮರಿ ಮುಂಗುಸಿಯನ್ನು ಹಿಡಿದು ಎಳೆದಾಡಿ ಹಲ್ಲೆ ನಡೆಸಿರುವ ಘಟನೆ ಉಳ್ಳಾಲದ ಸೂರ್ಯಖಂಡದಲ್ಲಿ ಸಂಭವಿಸಿದ್ದು, ಸಮೀಪದ ಲೇಔಟ್ ಪ್ರಬಂಧಕರೊಬ್ಬರು ಅದಕ್ಕೆ ಶುಶ್ರೂಷೆ ನೀಡಿ ಅರಣ್ಯ ಇಲಾಖೆಗೆ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ಸೂರ್ಯಖಂಡ ನಿರ್ಮಾಣ ಹಂತದ ಲೇಔಟ್ ಪ್ರಬಂಧಕ ಪುಷ್ಪರಾಜ್ ಹರೇಕಳ, ಕರ್ತವ್ಯ ಸಂಬಂಧ ಸ್ಥಳದಲ್ಲಿದ್ದಾಗ, ನಾಯಿಯೊಂದು ಅಲ್ಲೇ ಸಮೀಪ ಮುಂಗುಸಿ ಮರಿಯನ್ನು ಓಡಿಸಿ ಹಿಡಿದು, ನಂತರ ನೆಲಕ್ಕಪ್ಪಳಿಸಿದೆ. ಇದರಿಂದ ಬಾಲ ಹಾಗೂ ತಲೆಗೆ ಗಂಭೀರ ಗಾಯಗೊಂಡ ಮುಂಗುಸಿ ಗಂಭೀರ ಸ್ಥಿತಿಯಲ್ಲಿತ್ತು. ತಕ್ಷಣ ಸ್ಥಳದಲ್ಲಿದ್ದ ಪುಷ್ಪರಾಜ್ ಅವರು ಮುಂಗುಸಿಗೆ ನೀರು ಹಾಯಿಸಿದ್ದು, ತುಂಡಾದ ಬಾಲಕ್ಕೆ ಶುಶ್ರೂಷೆಯನ್ನು ನೀಡಿದ್ದಾರೆ. ನಂತರ ಅರಣ್ಯ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಮಂಗಳೂರು ರೇಂಜಿನ ಬೀಟ್ ಆಫೀಸರ್ ಪ್ರವೀಣ್ ಹಾಗೂ ಅರಣ್ಯ ವೀಕ್ಷಕ ಅಭಿಜಿತ್ ಅವರು ಮುಂಗುಸಿಗೆ ಚಿಕಿತ್ಸೆ ನೀಡಿ ಮರಳಿ ಅರಣ್ಯಕ್ಕೆ ಬಿಡಲು ಕೊಂಡೊಯ್ದಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…