ಉಳ್ಳಾಲ: ನಾಯಿಯೊಂದು ಮರಿ ಮುಂಗುಸಿಯನ್ನು ಹಿಡಿದು ಎಳೆದಾಡಿ ಹಲ್ಲೆ ನಡೆಸಿರುವ ಘಟನೆ ಉಳ್ಳಾಲದ ಸೂರ್ಯಖಂಡದಲ್ಲಿ ಸಂಭವಿಸಿದ್ದು, ಸಮೀಪದ ಲೇಔಟ್ ಪ್ರಬಂಧಕರೊಬ್ಬರು ಅದಕ್ಕೆ ಶುಶ್ರೂಷೆ ನೀಡಿ ಅರಣ್ಯ ಇಲಾಖೆಗೆ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ಸೂರ್ಯಖಂಡ ನಿರ್ಮಾಣ ಹಂತದ ಲೇಔಟ್ ಪ್ರಬಂಧಕ ಪುಷ್ಪರಾಜ್ ಹರೇಕಳ, ಕರ್ತವ್ಯ ಸಂಬಂಧ ಸ್ಥಳದಲ್ಲಿದ್ದಾಗ, ನಾಯಿಯೊಂದು ಅಲ್ಲೇ ಸಮೀಪ ಮುಂಗುಸಿ ಮರಿಯನ್ನು ಓಡಿಸಿ ಹಿಡಿದು, ನಂತರ ನೆಲಕ್ಕಪ್ಪಳಿಸಿದೆ. ಇದರಿಂದ ಬಾಲ ಹಾಗೂ ತಲೆಗೆ ಗಂಭೀರ ಗಾಯಗೊಂಡ ಮುಂಗುಸಿ ಗಂಭೀರ ಸ್ಥಿತಿಯಲ್ಲಿತ್ತು. ತಕ್ಷಣ ಸ್ಥಳದಲ್ಲಿದ್ದ ಪುಷ್ಪರಾಜ್ ಅವರು ಮುಂಗುಸಿಗೆ ನೀರು ಹಾಯಿಸಿದ್ದು, ತುಂಡಾದ ಬಾಲಕ್ಕೆ ಶುಶ್ರೂಷೆಯನ್ನು ನೀಡಿದ್ದಾರೆ. ನಂತರ ಅರಣ್ಯ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಮಂಗಳೂರು ರೇಂಜಿನ ಬೀಟ್ ಆಫೀಸರ್ ಪ್ರವೀಣ್ ಹಾಗೂ ಅರಣ್ಯ ವೀಕ್ಷಕ ಅಭಿಜಿತ್ ಅವರು ಮುಂಗುಸಿಗೆ ಚಿಕಿತ್ಸೆ ನೀಡಿ ಮರಳಿ ಅರಣ್ಯಕ್ಕೆ ಬಿಡಲು ಕೊಂಡೊಯ್ದಿದ್ದಾರೆ.
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…