ಜನ ಮನದ ನಾಡಿ ಮಿಡಿತ

Advertisement

ಕಟೀಲಿನಲ್ಲಿ ವಿವಿ ಮಟ್ಟದ ಕರಾಟೆ; ಸೈಂಟ್ ಅಲೋಶಿಯಸ್‌ಗೆ ಸಮಗ್ರ ಪ್ರಶಸ್ತಿ

ಬಜಪೆ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಮಟ್ಟದ ಪುರುಷರ ಮತ್ತು ಮಹಿಳೆಯರ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.


ಸಮಗ್ರ ಪ್ರಶಸ್ತಿ ವಿಭಾಗದಲ್ಲಿ ಮಂಗಳೂರು ಸೈಂಟ್ ಅಲೋಸಿಯಸ್ ಕಾಲೇಜು ಪ್ರಥಮ, ಮಂಗಳೂರು ಎಸ್‌ಡಿಎಂ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ ದ್ವಿತೀಯ, ಮಂಗಳೂರು ಸೈಂಟ್ ಆಗ್ನೆಸ್ ಕಾಲೇಜು ತೃತೀಯ ಪ್ರಶಸ್ತಿ ಪಡೆದವು.
ಪುರುಷರ ವಿಭಾಗದಲ್ಲಿ ಮಂಗಳೂರು ಎಸ್‌ಡಿಎಂ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ ಪ್ರಥಮ, ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜು ದ್ವಿತೀಯ, ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜು ತೃತೀಯ ಪ್ರಶಸ್ತಿಯನ್ನು ಪಡೆದವು. ಮಹಿಳೆಯರ ವಿಭಾಗದಲ್ಲಿ ಮಂಗಳೂರು ಸೈಂಟ್ ಆಗ್ನೆಸ್ ಕಾಲೇಜು ಪ್ರಥಮ, ಸೈಂಟ್ ಅಲೋಸಿಯಸ್ ಕಾಲೇಜು ದ್ವಿತೀಯ, ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜು ತೃತೀಯ ಪ್ರಶಸ್ತಿ ಪಡೆದವು.
ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಎಂ. ವಿವೇಕ್ ಆಳ್ವ, ಹಳೆ ವಿದ್ಯಾರ್ಥಿ ಸಂಘದ ಕಿರಣ್ ಕುಮಾರ ಶೆಟ್ಟಿ, ಉದ್ಯಮಿ ಧನಂಜಯ ರೈ, ವೃಂದಾ ಎಸ್. ಹೆಗ್ಡೆ, ಕಟೀಲು ಕಾಲೇಜಿನ ಪ್ರಾಂಶುಪಾಲ ಡಾ. ವಿಜಯ್ ವಿ., ಜಯರಾಮ ರೈ, ಶೆಲ್ವಂದ್ರನ್, ವಿವಿಯ ಶಂಕರ ನಾರಾಯಣ, ಕರಾಟೆ ಶಿಕ್ಷಕರಾದ ಈಶ್ವರ ಕಟೀಲ್, ಮೋರ್ಗನ್ ವಿಲಿಯಂ, ಚಂದ್ರಹಾಸ ಅಂಚನ್, ಸುರೇಶ್, ವಿಕ್ಟರ್, ಶಿವಪ್ರಸಾದ್, ನಾಗರಾಜ್, ನಿತಿನ್, ವಿದ್ಯಾರ್ಥಿ ಸಂಘದ ದೀಪಕ್, ಕೃಷ್ಣರಾಜ ಐತಾಳ್, ಪುಷ್ಪರಾಜ ಶೆಟ್ಟಿ, ಬಿ. ನಿಶಾ, ಆಶಿಕ್, ಜಯಲಕ್ಷ್ಮೀ ಮತ್ತಿತರರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!