ಬಜಪೆ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಮಟ್ಟದ ಪುರುಷರ ಮತ್ತು ಮಹಿಳೆಯರ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ಸಮಗ್ರ ಪ್ರಶಸ್ತಿ ವಿಭಾಗದಲ್ಲಿ ಮಂಗಳೂರು ಸೈಂಟ್ ಅಲೋಸಿಯಸ್ ಕಾಲೇಜು ಪ್ರಥಮ, ಮಂಗಳೂರು ಎಸ್ಡಿಎಂ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ದ್ವಿತೀಯ, ಮಂಗಳೂರು ಸೈಂಟ್ ಆಗ್ನೆಸ್ ಕಾಲೇಜು ತೃತೀಯ ಪ್ರಶಸ್ತಿ ಪಡೆದವು.
ಪುರುಷರ ವಿಭಾಗದಲ್ಲಿ ಮಂಗಳೂರು ಎಸ್ಡಿಎಂ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಪ್ರಥಮ, ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ದ್ವಿತೀಯ, ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜು ತೃತೀಯ ಪ್ರಶಸ್ತಿಯನ್ನು ಪಡೆದವು. ಮಹಿಳೆಯರ ವಿಭಾಗದಲ್ಲಿ ಮಂಗಳೂರು ಸೈಂಟ್ ಆಗ್ನೆಸ್ ಕಾಲೇಜು ಪ್ರಥಮ, ಸೈಂಟ್ ಅಲೋಸಿಯಸ್ ಕಾಲೇಜು ದ್ವಿತೀಯ, ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ತೃತೀಯ ಪ್ರಶಸ್ತಿ ಪಡೆದವು.
ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಎಂ. ವಿವೇಕ್ ಆಳ್ವ, ಹಳೆ ವಿದ್ಯಾರ್ಥಿ ಸಂಘದ ಕಿರಣ್ ಕುಮಾರ ಶೆಟ್ಟಿ, ಉದ್ಯಮಿ ಧನಂಜಯ ರೈ, ವೃಂದಾ ಎಸ್. ಹೆಗ್ಡೆ, ಕಟೀಲು ಕಾಲೇಜಿನ ಪ್ರಾಂಶುಪಾಲ ಡಾ. ವಿಜಯ್ ವಿ., ಜಯರಾಮ ರೈ, ಶೆಲ್ವಂದ್ರನ್, ವಿವಿಯ ಶಂಕರ ನಾರಾಯಣ, ಕರಾಟೆ ಶಿಕ್ಷಕರಾದ ಈಶ್ವರ ಕಟೀಲ್, ಮೋರ್ಗನ್ ವಿಲಿಯಂ, ಚಂದ್ರಹಾಸ ಅಂಚನ್, ಸುರೇಶ್, ವಿಕ್ಟರ್, ಶಿವಪ್ರಸಾದ್, ನಾಗರಾಜ್, ನಿತಿನ್, ವಿದ್ಯಾರ್ಥಿ ಸಂಘದ ದೀಪಕ್, ಕೃಷ್ಣರಾಜ ಐತಾಳ್, ಪುಷ್ಪರಾಜ ಶೆಟ್ಟಿ, ಬಿ. ನಿಶಾ, ಆಶಿಕ್, ಜಯಲಕ್ಷ್ಮೀ ಮತ್ತಿತರರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…