ಕಡಬ :ಚುನಾವಣೆ ಸಮಯದಲ್ಲಿ ರೈತರ ಪರವಾನಿಗೆ ಇರುವ ಬಂದೂಕುಗಳನ್ನು ಠಾಣೆಗಳಲ್ಲಿ ಠೇವಣಿ ಇಡಲು ಸರಕಾರ ಆದೇಶ ನೀಡಿರುವುದರ ವಿರುದ್ಧ ಕಾನೂನು ಹೋರಾಟ ನಡೆಸುವ ಸಲುವಾಗಿ ಕೃಷಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ನೇತೃತ್ವದಲ್ಲಿ ಕಡಬದ ಒಕ್ಕಲಿಗ ಸಮುದಾಯ ಭವನದಲ್ಲಿ ಸಮಾಲೋಚನ ಸಭೆ ನಡೆಸಲಾಯಿತು.
ಸಭೆಯಲ್ಲಿ ಕಾನೂನು ಮಾಹಿತಿ ನೀಡಿದ ನ್ಯಾಯವಾದಿ ಕೊಲ್ಲಮೊಗ್ರದ ಪ್ರದೀಪ್ ಕುಮಾರ್ ಕೆ.ಎಲ್.ಅವರು ಬಂದೂಕುಗಳನ್ನು ಠೇವಣಿ ಇಡಲು ಸರಕಾರ ಆದೇಶಿಸಿರುವುದರ ವಿರುದ್ದ ಕಾನೂನು ಹೋರಾಟ ಅನಿವಾರ್ಯವಾಗಿದೆ. ಈಗಾಗಲೇ ಹಲವಾರು ಮಂದಿ ಕೃಷಿಕರು ವೈಯಕ್ತಿಕವಾಗಿ ಕಾನೂನು ಹೋರಾಟ ನಡೆಸಿ ಬಂದೂಕು ಠೇವಣಿ ಇಡುವುದರಿಂದ ವಿನಾಯಿತಿ ಪಡೆದಿದ್ದಾರೆ. ಬಂದೂಕು ಠೇವಣಿ ಇಡುವಂತೆ ಕೃಷಿಕರನ್ನು ಬಲವಂತಪಡಿಸಬಾರದು ಎಂದು ಈಗಾಗಲೇ ಉಚ್ಚ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಕೇರಳ ರಾಜ್ಯದಲ್ಲಿ ಬಂದೂಕುಗಳನ್ನು ಠೇವಣಿ ಇಡುವ ನಿಯಮವಿಲ್ಲ, ಅದೇ ರೀತಿ ಕರ್ನಾಟಕದಲ್ಲಿಯೂ ಆದೇಶ ಹೊರಡಿಸುವ ನಿಟ್ಟಿನಲ್ಲಿ ನಾವೆಲ್ಲರೂ ಸೇರಿ ಕಾನೂನು ಹೋರಾಟ ಮಾಡಬೇಕಿದೆ. ಆ ರೀತಿ ಆದೇಶವಾದರೆ ಮಾತ್ರ ಕೃಷಿಕರು ಪ್ರತೀ
ಚುನಾವಣೆಯ ವೇಳೆಯೂ ಎದುರಿಸುವ ತೊಂದರೆಯಿಂದ ಪಾರಾಗಬಹುದು ಎಂದು ಅಭಿಪ್ರಾಯಪಟ್ಟರು.
ಉಚ್ಚನ್ಯಾಯಾಲಯದ
ಮೊರೆ ಹೋಗಲು ನಿರ್ಧಾರ
ಪ್ರಕರಣಕ್ಕೆ ಸಂಬಂಧಿಸಿ ನ್ಯಾಯವಾದಿ ಪ್ರದೀಪ್ ಕುಮಾರ್ ಕೆ.ಎಲ್. ಅವರ ಮೂಲಕ ಬಂದೂಕು ಠೇವಣಿ ಇಡುವುದರಿಂದ ವಿನಾಯಿತಿ ಪಡೆಯಲು ಮತ್ತು ವಿಚಾರಕ್ಕೆ ಶಾಶ್ವತ ಪರಿಹಾರ ಪಡೆಯಲು ಸಭೆಯಲ್ಲಿ ಭಾಗವಹಿಸಿದ 33 ಮಂದಿ ಕೃಷಿಕರು ವೈಯಕ್ತಿಕ ನೆಲೆಯಲ್ಲಿ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ನಿರ್ಧರಿಸಿ ಅಗತ್ಯ ದಾಖಲೆಗಳನ್ನು ನ್ಯಾಯವಾದಿಗೆ ಹಸ್ತಾಂತರಿಸಿ ವಕಾಲತಿಗೆ ಸಹಿ ಹಾಕಿದರು. ಅರ್ಜಿಯನ್ನು ಎ. 4ರಂದೇ ನ್ಯಾಯಾಲಯದಲ್ಲಿ ವಿಚಾರಣೆಗೆ ಬರುವ
ರೀತಿಯಲ್ಲಿ ಪ್ರಯತ್ನಿಸುವುದಾಗಿ ನ್ಯಾಯವಾದಿ ಭರವಸೆ ನೀಡಿದರು.
ರೈತ ಮುಖಂಡ ವಿಕ್ಟರ್ ಮಾರ್ಟಿಸ್ ಹೊಸಮಠ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ, ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್, ಕುಂತೂರು ಪದವು ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಜೇಮ್ಸ್ ಥಾಮಸ್ ವಿ.ಎಂ., ಸವಣೂರಿನ ನಾಟಿ ವೈದ್ಯ ವಾಸುದೇವ ಇಡ್ಯಾಡಿ, ಪ್ರಮುಖರಾದ ವರ್ಗೀಸ್ ತೊಮಸ್ ಎಂಜಿರ, ಸಂತೋಷ್ ಉಳಿಪು, ಚಂದ್ರಶೇಖರ ಗೌಡ ಕೋಡಿಬೈಲು, ಬಾಲಕೃಷ್ಣ ಭಟ್ ಮೂಜೂರುಕಟ್ಟ ಶಿವಪ್ರಕಾಶ್ ನೆಲ್ಯಾಡಿ, ರಜಾಕ್ ಅಡ್ಡಗದ್ದೆ, ಉಮ್ಮರ್ ಮುಳಾರ್, ಕರುಣಾಕರ ಗೌಡ ಮತ್ತಿತರರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…