ಉಡುಪಿ: ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಬೆಂಗಳೂರಿನ ಡಾ. ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳ ವತಿಯಿಂದ ಅಯೋಧ್ಯೆ ರಾಮಮಂದಿರಕ್ಕೆ ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮೂಲಕ ಸುಸಜ್ಜಿತ ಆ್ಯಂಬುಲೆನ್ಸ್ ಅನ್ನು ಶುಕ್ರವಾರ ಅಯೋಧ್ಯೆಯಲ್ಲಿ ಹಸ್ತಾಂತರಿಸಲಾಯಿತು.
ರಾಮಮಂದಿರಕ್ಕೆ ಪ್ರತಿನಿತ್ಯ ಬರುತ್ತಿರುವ ಲಕ್ಷಾಂತರ ಭಕ್ತರ ತುರ್ತು ಆರೋಗ್ಯ ಸೇವೆಗಾಗಿ ಆ್ಯಂಬುಲೆನ್ಸ್ ಅನ್ನು ಒದಗಿಸುವ ಇಂಗಿತವನ್ನು ಸಂಸ್ಥೆಯ ಪ್ರಮುಖರಾದ ಪಟ್ಟಾಭಿರಾಮ್ ಅವರು ಶ್ರೀಗಳರಲ್ಲಿ ವ್ಯಕ್ತಪಡಿಸಿದ್ದರು. ಅದರಂತೆ ಸುಮಾರು 38 ಲಕ್ಷ ರೂ ವೆಚ್ಚದ ಸುಸಜ್ಜಿತವಾದ ನೂತನ ಆ್ಯಂಬುಲೆನ್ಸ್ ಅ ನ್ನು ಅಯೋಧ್ಯೆಯಲ್ಲಿ ಶ್ರೀ ಪಟ್ಟಾಭಿರಾಮ್ ಮತ್ತು ಅನಿತಾ ಪಟ್ಟಾಭಿರಾಮ್ ಅವರು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಗೆ ಹಸ್ತಾಂತರಿಸಿದರು.
ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ , ಕೋಶಾಧಿಕಾರಿ ಸ್ವಾಮಿ ಗೋವಿಂದಗಿರಿ ಮಹಾರಾಜ್, ಅನಿಲ್ ಮಿಶ್ರಾ , ವಿಹಿಂಪ ರಾಷ್ಟ್ರೀಯ ಮುಖಂಡ ಗೋಪಾಲ್ ಜಿ, ಪೇಜಾವರ ಮಠದ ಅಧಿಕಾರಿಗಳಾದ ಶ್ರೀವತ್ಸ ತಂತ್ರಿ , ಶ್ರೀಗಳ ಆಪ್ತರಾದ ಶ್ರೀನಿವಾಸ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…