ಜನ ಮನದ ನಾಡಿ ಮಿಡಿತ

Advertisement

ದ.ಕ. ಲೋಕಸಭಾ ಚುನಾವಣೆ: ಸೌಜನ್ಯಾ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಸೌಜನ್ಯಾ ಪರ ಹೋರಾಟ ಸಮಿತಿ ನೋಟ ಅಭಿಯಾನ ಹಮ್ಮಿಕೊಂಡಿದ್ದು, ಹೋರಾಟ ಗಾರರು ಈ ಬಾರಿ ನೋಟ ಮತ ಚಲಾಯಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ ಎಂದು ಸಮಿತಿಯ ಮುಖಂಡ ಗಿರೀಶ್ ಮಟ್ಟಣ್ಣನವರ್ ತಿಳಿಸಿದ್ದಾರೆ.

ಶುಕ್ರವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ನಡೆದು 11 ವರ್ಷ ಕಳೆದರೂ ಯಾವುದೇ ರಾಜಕೀಯ ಪಕ್ಷಗಳು ಸ್ಪಂದನೆ‌ ನೀಡಿಲ್ಲ. ಆದ್ದರಿಂದ ಈ ಬಾರಿ ನೋಟಕ್ಕೆ ಮತಚಲಾಯಿಸಿ ಗಮನ ಸೆಳೆಯಲು ಉದ್ದೇಶಿಸಲಾಗಿದೆ. ದ‌.ಕ. ಹಾಗೂ ಉಡುಪಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರವಾರು ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಎ. 24ರಂದು ನೋಟ ಜನಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದರು.

ನೋಟ ಬಗ್ಗೆ ಜನ ಜಾಗೃತಿ ಅಗತ್ಯವಿದೆ ಎಂದು ನ್ಯಾಯಾಲಯವೇ ಹೇಳಿದೆ. ಚುನಾವಣಾ ಆಯೋಗವೂ ನಮ್ಮ ಈ ಅಭಿಯಾನಕ್ಕೆ ಸಹಕಾರ ನೀಡುವ ಜೊತೆ ಹೆಣ್ಣು ಮಕ್ಕಳ ಬಗ್ಗೆ ಪ್ರಾಧಾನ್ಯತೆ ನೀಡುವ ಈ ಅಭಿಯಾನಕ್ಕೆ ಜನರು ಸಹಕಾರ ನೀಡಬೇಕು ಎಂದರು.

ಚುನಾವಣೆ ಹಿನ್ನೆಲೆಯಲ್ಲಿ 50 ಸಾವಿರಕ್ಕಿಂತ ಹೆಚ್ಚಿನ ಹಣ ಸಾಗಿಸಲು ನಿರ್ಬಂಧ ಇದೆ. ಆದರೆ ಸಂಘದ ಹೆಸರಿನಲ್ಲಿ ಬಡ್ಡಿ ದಂಧೆಯಲ್ಲಿ ಸಂಗ್ರಹಿಸಿದ ಅಕ್ರಮ ಲಕ್ಷಗಟ್ಟಲೆ ಹಣ ಶುಕ್ರವಾರ, ಶನಿವಾರ ನಿರ್ಭೀತಿಯಿಂದ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ ಗಿರೀಶ್ ಮಟ್ಟಣ್ಣನವರ್, ಚುನಾವಣಾ ಆಯೋಗ ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದರು. ದ.ಕ. ಹಾಗೂ ಉಡುಪಿಯ ಕರಾವಳಿ ಭಾಗದಲ್ಲಿ ಈ ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಎ.24ರಂದು ನೋಟ ಜನಜಾಗೃತಿ ಸಭೆ ನಡೆಸುತ್ತಿರುವುದಾಗಿ ಪ್ರಸನ್ನ ರವಿ ತಿಳಿಸಿದರು. ಈ ಸುದ್ದಿಗೋಷ್ಠಿಯಲ್ಲಿ ತಮ್ಮಣ್ಣ ಶೆಟ್ಟಿ, ಜಯನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!