ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಸೌಜನ್ಯಾ ಪರ ಹೋರಾಟ ಸಮಿತಿ ನೋಟ ಅಭಿಯಾನ ಹಮ್ಮಿಕೊಂಡಿದ್ದು, ಹೋರಾಟ ಗಾರರು ಈ ಬಾರಿ ನೋಟ ಮತ ಚಲಾಯಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ ಎಂದು ಸಮಿತಿಯ ಮುಖಂಡ ಗಿರೀಶ್ ಮಟ್ಟಣ್ಣನವರ್ ತಿಳಿಸಿದ್ದಾರೆ.
ಶುಕ್ರವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ನಡೆದು 11 ವರ್ಷ ಕಳೆದರೂ ಯಾವುದೇ ರಾಜಕೀಯ ಪಕ್ಷಗಳು ಸ್ಪಂದನೆ ನೀಡಿಲ್ಲ. ಆದ್ದರಿಂದ ಈ ಬಾರಿ ನೋಟಕ್ಕೆ ಮತಚಲಾಯಿಸಿ ಗಮನ ಸೆಳೆಯಲು ಉದ್ದೇಶಿಸಲಾಗಿದೆ. ದ.ಕ. ಹಾಗೂ ಉಡುಪಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರವಾರು ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಎ. 24ರಂದು ನೋಟ ಜನಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದರು.
ನೋಟ ಬಗ್ಗೆ ಜನ ಜಾಗೃತಿ ಅಗತ್ಯವಿದೆ ಎಂದು ನ್ಯಾಯಾಲಯವೇ ಹೇಳಿದೆ. ಚುನಾವಣಾ ಆಯೋಗವೂ ನಮ್ಮ ಈ ಅಭಿಯಾನಕ್ಕೆ ಸಹಕಾರ ನೀಡುವ ಜೊತೆ ಹೆಣ್ಣು ಮಕ್ಕಳ ಬಗ್ಗೆ ಪ್ರಾಧಾನ್ಯತೆ ನೀಡುವ ಈ ಅಭಿಯಾನಕ್ಕೆ ಜನರು ಸಹಕಾರ ನೀಡಬೇಕು ಎಂದರು.
ಚುನಾವಣೆ ಹಿನ್ನೆಲೆಯಲ್ಲಿ 50 ಸಾವಿರಕ್ಕಿಂತ ಹೆಚ್ಚಿನ ಹಣ ಸಾಗಿಸಲು ನಿರ್ಬಂಧ ಇದೆ. ಆದರೆ ಸಂಘದ ಹೆಸರಿನಲ್ಲಿ ಬಡ್ಡಿ ದಂಧೆಯಲ್ಲಿ ಸಂಗ್ರಹಿಸಿದ ಅಕ್ರಮ ಲಕ್ಷಗಟ್ಟಲೆ ಹಣ ಶುಕ್ರವಾರ, ಶನಿವಾರ ನಿರ್ಭೀತಿಯಿಂದ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ ಗಿರೀಶ್ ಮಟ್ಟಣ್ಣನವರ್, ಚುನಾವಣಾ ಆಯೋಗ ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದರು. ದ.ಕ. ಹಾಗೂ ಉಡುಪಿಯ ಕರಾವಳಿ ಭಾಗದಲ್ಲಿ ಈ ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಎ.24ರಂದು ನೋಟ ಜನಜಾಗೃತಿ ಸಭೆ ನಡೆಸುತ್ತಿರುವುದಾಗಿ ಪ್ರಸನ್ನ ರವಿ ತಿಳಿಸಿದರು. ಈ ಸುದ್ದಿಗೋಷ್ಠಿಯಲ್ಲಿ ತಮ್ಮಣ್ಣ ಶೆಟ್ಟಿ, ಜಯನ್ ಉಪಸ್ಥಿತರಿದ್ದರು.
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…