ಸುಬ್ರಹ್ಮಣ್ಯ: ದ.ಕ.ಜಿಲ್ಲಾ ಇತಿಹಾಸ ಉಪನ್ಯಾಸಕರ ಸಂಘದ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಳ್ಯ ಶಾರದಾ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್.ಎಚ್ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಸಂಘದ ಅಧ್ಯಕ್ಷ ರಾಮಚಂದ್ರ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು.ಕಾರ್ಯದರ್ಶಿಯಾಗಿ ಮಂಗಳೂರಿನ ಬಿಇಎಂ ಪದವಿಪೂರ್ವ ಕಾಲೇಜಿನ ಐತಪ್ಪ.ಎಂ ನೇಮಕಗೊಂಡರು.
ಉಳಿದಂತೆ ಕಾಟಿಪಳ್ಳ ಸರಕಾರಿ ಕಾಲೇಜಿನ ಪೂರ್ಣಿಮಾ ಕಾಮತ್(ಉಪಾಧ್ಯಕ್ಷರು),ಬೆಸೆಂಟ್ ಪದವಿಪೂರ್ವ ಕಾಲೇಜಿನ ಗಾಯತ್ರಿ ಶೆಟ್ಟಿ(ಕೋಶಾಧಿಕಾರಿ), ಪುತ್ತೂರು ಸರಕಾರಿನ ಕಾಲೇಜಿನ ಮನಮೋಹನ್(ಸಂಘಟನಾ ಕಾರ್ಯದರ್ಶಿ), ಬಲ್ಮಠ ಸರಕಾರಿ ಕಾಲೇಜಿನ ಕೃಷ್ಣಯ್ಯ(ಜತೆಕಾರ್ಯದರ್ಶಿ), ಬೆಸೆಂಟ್ ವಿದ್ಯಾಲಯದ ರೂಪಾಕ್ಷ.ಎಂ(ಗೌರವಸಲಹೆಗಾರರು)ಆಯ್ಕೆಗೊ0ಡರು.ತಾಲೂಕುಪ್ರತಿನಿಧಿಗಳಾಗಿರತ್ನಾಕರ ಸುಬ್ರಹ್ಮಣ್ಯ(ಸುಳ್ಯ,ಕಡಬ), ರೋಹಿತಾ, ಯೋಗಿತಾ, ಧರ್ಮಪಾಲ (ಮಂಗಳೂರು), ಗಿರೀಶ್ ತಂತ್ರಿ ಕಟೀಲು (ಮೂಲ್ಕಿ, ಮೂಡಬಿದ್ರೆ), ದಾಮೋದರ್(ಪುತ್ತೂರು), ಶೈಲಜಾ(ಬೆಳ್ತಂಗಡಿ), ರೇವತಿ (ಉಳ್ಳಾಲ) ನೇಮಕಗೊಂಡರು.ಮೂಡಬಿದ್ರೆ ಜೈನ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಪ್ರಭಾತ್ ಬಲ್ನಾಡ್ ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು.
ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…
ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…