ತುಳುನಾಡ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಮಂಗಳೂರು: ಇಲ್ಲಿನ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಪುಷ್ಪಾರ್ಚನೆ ಮಾಡಿದರು.
ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮೊದಲೇ ತುಳುನಾಡಿನಲ್ಲಿ ಸ್ವಾತಂತ್ರ್ಯ ಹೋರಾಟ ನಡೆದಿತ್ತು. ಇದನ್ನು ಅಮರ ಸುಳ್ಯದ ದಂಗೆ ಎಂದು ಕರೆದರೆ, ಇನ್ನೂ ಕೆಲವರು ತುಳುನಾಡ ಸ್ವಾತಂತ್ರ್ಯ ಸಂಗ್ರಾಮ ಎಂದೂ ಕರೆದದ್ದಿದೆ. ಈ ಹೋರಾಟದಲ್ಲಿ ಕೆದಂಬಾಡಿ ರಾಮಯ್ಯ ಗೌಡ ಅವರು ಪ್ರಮುಖ ಪಾತ್ರ ವಹಿಸಿದ್ದರು.
ಈ ಹೋರಾಟದಲ್ಲಿ ಬ್ರಿಟಿಷರನ್ನು ಪರಾಭವಗೊಳಿಸಿದ ತುಳುನಾಡ ಹೋರಾಟಗಾರರು ಮುಂದಿನ 13 ದಿನಗಳ ಕಾಲ ಸ್ವತಂತ್ರ ತುಳುನಾಡನ್ನು ಆಳ್ವಿಕೆ ಮಾಡಿದ್ದರು. ಹೀಗೆ ಆಳ್ವಿಕೆ ಶುರು ಮಾಡಿದ ದಿನ ಏಪ್ರಿಲ್ 5.
ಈ ಹಿನ್ನೆಲೆಯಲ್ಲಿ ಈ ನಾಡಿನ ಸ್ವಾತಂತ್ರ್ಯಕ್ಕಾಗಿ ತನ್ನ ಪ್ರಾಣಾರ್ಪಣೆಗೈದ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ತುಳುನಾಡ ಸಂಗ್ರಾಮದಲ್ಲಿ ಪಾಲ್ಗೊಂಡ ವೀರರಿಗೆ ಗೌರವ ಸಲ್ಲಿಸಲಾಯಿತು.
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…