ಕಡಬ :ನಾಯಿ ಅಡ್ಡ ಬಂದು ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಆಲಂಕಾರು ಸಮೀಪದ ಸುರುಳಿ ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ಸ್ಥಳೀಯ ವ್ಯಕ್ತಿ ಸುಬ್ರಹ್ಮಣ್ಯ ನಾಯ್ಕ ಎಂದು ಗುರುತಿಸಲಾಗಿದೆ. ಇವರು ತಮ್ಮ ಅಟೋದಲ್ಲಿ ಸುರುಳಿ ಕಡೆಯಿಂದ ಆಲಂಕಾರಿಗೆ ಬರುವಾಗ ಸುರುಳಿ ಸೇತುವೆಯ ಬಳಿ ಇಕ್ಕಟ್ಟಾದ ಸ್ಥಳದಲ್ಲಿ ನಾಯಿ ಅಡ್ಡ ಬಂದು ಅಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಅಟೋ ನಜ್ಜುಗುಜ್ಜಾಗಿದೆ. ಚಾಲಕನ ಕಾಲು ಮುರಿತಕ್ಕೆ ಒಳಗಾಗಿದ್ದು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ತಕ್ಷಣ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ. ಅಟೋದಲ್ಲಿ ಚಾಲಕ ಮಾತ್ರ ಇದ್ದು, ಪ್ರಯಾಣಿ ಕರು ಇಲ್ಲದೆ ಇರುವುದರಿಂದ ಸಂಭಾವ್ಯ ಅಪಾಯ ತಪ್ಪಿದೆ. ಘಟನೆ ನಡೆದ ಸ್ಥಳ ಅಪಾಯಕಾರಿಯಾಗಿದ್ದು, ಇಕ್ಕಟ್ಟಾದ ಪರಿಣಾಮ ಇಲ್ಲಿ ಹತ್ತು ಹಲವು ಅಫಘಾತ ನಡೆದಿದೆ. ಇಲ್ಲಿ ರಸ್ತೆ ಅಗಲೀಕರಣ ಆಗಬೇಕೆಂದು ಸ್ಥಳೀಯರು ಅಗ್ರಹಿಸಿದ್ದಾರೆ.



