ಜನ ಮನದ ನಾಡಿ ಮಿಡಿತ

Advertisement

ಅಟೋ ಪಲ್ಟಿ ಚಾಲಕ ಗಂಭೀರ

ಕಡಬ :ನಾಯಿ ಅಡ್ಡ ಬಂದು ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಆಲಂಕಾರು ಸಮೀಪದ ಸುರುಳಿ ಎಂಬಲ್ಲಿ ನಡೆದಿದೆ.


ಗಾಯಗೊಂಡವರನ್ನು ಸ್ಥಳೀಯ ವ್ಯಕ್ತಿ ಸುಬ್ರಹ್ಮಣ್ಯ ನಾಯ್ಕ ಎಂದು ಗುರುತಿಸಲಾಗಿದೆ. ಇವರು ತಮ್ಮ ಅಟೋದಲ್ಲಿ ಸುರುಳಿ ಕಡೆಯಿಂದ ಆಲಂಕಾರಿಗೆ ಬರುವಾಗ ಸುರುಳಿ ಸೇತುವೆಯ ಬಳಿ ಇಕ್ಕಟ್ಟಾದ ಸ್ಥಳದಲ್ಲಿ ನಾಯಿ ಅಡ್ಡ ಬಂದು ಅಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಅಟೋ ನಜ್ಜುಗುಜ್ಜಾಗಿದೆ. ಚಾಲಕನ‌ ಕಾಲು ಮುರಿತಕ್ಕೆ ಒಳಗಾಗಿದ್ದು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು‌ ತಕ್ಷಣ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ‌ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ. ಅಟೋದಲ್ಲಿ ಚಾಲಕ ಮಾತ್ರ ಇದ್ದು, ಪ್ರಯಾಣಿ ಕರು ಇಲ್ಲದೆ ಇರುವುದರಿಂದ ಸಂಭಾವ್ಯ ಅಪಾಯ ತಪ್ಪಿದೆ. ಘಟನೆ ನಡೆದ ಸ್ಥಳ ಅಪಾಯಕಾರಿಯಾಗಿದ್ದು, ಇಕ್ಕಟ್ಟಾದ ಪರಿಣಾಮ ಇಲ್ಲಿ ಹತ್ತು ಹಲವು ಅಫಘಾತ ನಡೆದಿದೆ. ಇಲ್ಲಿ ರಸ್ತೆ ಅಗಲೀಕರಣ ಆಗಬೇಕೆಂದು ಸ್ಥಳೀಯರು ಅಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!