ಕಡಬ :ನಾಯಿ ಅಡ್ಡ ಬಂದು ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಆಲಂಕಾರು ಸಮೀಪದ ಸುರುಳಿ ಎಂಬಲ್ಲಿ ನಡೆದಿದೆ.
ಗಾಯಗೊಂಡವರನ್ನು ಸ್ಥಳೀಯ ವ್ಯಕ್ತಿ ಸುಬ್ರಹ್ಮಣ್ಯ ನಾಯ್ಕ ಎಂದು ಗುರುತಿಸಲಾಗಿದೆ. ಇವರು ತಮ್ಮ ಅಟೋದಲ್ಲಿ ಸುರುಳಿ ಕಡೆಯಿಂದ ಆಲಂಕಾರಿಗೆ ಬರುವಾಗ ಸುರುಳಿ ಸೇತುವೆಯ ಬಳಿ ಇಕ್ಕಟ್ಟಾದ ಸ್ಥಳದಲ್ಲಿ ನಾಯಿ ಅಡ್ಡ ಬಂದು ಅಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಅಟೋ ನಜ್ಜುಗುಜ್ಜಾಗಿದೆ. ಚಾಲಕನ ಕಾಲು ಮುರಿತಕ್ಕೆ ಒಳಗಾಗಿದ್ದು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ತಕ್ಷಣ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ. ಅಟೋದಲ್ಲಿ ಚಾಲಕ ಮಾತ್ರ ಇದ್ದು, ಪ್ರಯಾಣಿ ಕರು ಇಲ್ಲದೆ ಇರುವುದರಿಂದ ಸಂಭಾವ್ಯ ಅಪಾಯ ತಪ್ಪಿದೆ. ಘಟನೆ ನಡೆದ ಸ್ಥಳ ಅಪಾಯಕಾರಿಯಾಗಿದ್ದು, ಇಕ್ಕಟ್ಟಾದ ಪರಿಣಾಮ ಇಲ್ಲಿ ಹತ್ತು ಹಲವು ಅಫಘಾತ ನಡೆದಿದೆ. ಇಲ್ಲಿ ರಸ್ತೆ ಅಗಲೀಕರಣ ಆಗಬೇಕೆಂದು ಸ್ಥಳೀಯರು ಅಗ್ರಹಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…