ಇಳಕಲ್ : ತಾಲೂಕಿನ ಗೊರಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಹಾಗೂ ವಲಸೆ ಯಾಕ್ರಿ, ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ ಮೂಡಿಸುವ
ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು ಮತದಾನ ಜಾಗೃತಿ ಮೂಡಿಸುವ ರಂಗೋಲಿಗಳ ಹಾಕಿದ ಸ್ಫರ್ಧಿಗಳಿಗೆ ಪ್ರಥಮ ಸ್ಥಾನ, ದ್ವಿತೀಯ ಹಾಗೂ ತೃತೀಯ ಸ್ಥಾನ ಆಯ್ಕೆ ಮಾಡಿ ಪ್ರಶಸ್ತಿ ಪತ್ರ ನೀಡಲಾಯಿತು.
ಸಹಾಯಕ ನಿರ್ದೇಶಕರು ಪ್ರತಿಜ್ಞಾ ವಿಧಿ ಭೋಧಿಸುವ ಮೂಲಕ ಸ್ವ ಸಹಾಯ ಸಂಘದ ಸದಸ್ಯರಿಗೆ ಮತದಾನ ಅರಿವು ಮೂಡಿಸಿ, ಕಡ್ಡಾಯವಾಗಿ ವಲಸೆ ಯಾಕ್ರಿ, ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನ ಮೂಲಕ ಕೂಲಿ ಕೆಲಸದಲ್ಲಿ ಆಸಕ್ತಿ ಇರುವ ಮಹಿಳೆಯರಿಗೆ ಫಾರ್ಮ್ ನಂ 6 ನೀಡಿ, ಉದ್ಯೋಗ ಹಾಜರಾಗುವಂತೆ ಇಳಕಲ್ ತಾಲೂಕಿನ ಸಹಾಯಕ ನಿರ್ದೇಶಕ ಜಿ .ಎಸ್. ಶಿರಗುಪ್ಪಿ ತಿಳಿಸಿದರು.
ಈ ಸಂದರ್ಭದಲ್ಲಿ ಗೊರೆಬಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ .ಎ. ದಕಣಿ, ತಾಂತ್ರಿಕ ಸಂಯೋಜಕ ವಿಶ್ವನಾಥ, ಎನ್. ಆರ್. ಎಲ್. ಎಂ. ಸಂಯೋಜಕ ಕೃಷ್ಣ ಪವಾರ, ಐ.ಇ.ಸಿ. ಸಂಯೋಜಕಿ ಎಲ್ಲಮ್ಮ ಬಂಡ್ರಿ, ತಾ.ಪಂ. ಕಾರ್ಯದರ್ಶಿ ದೇವಣ್ಣ ಕಳ್ಳಿ, ಶಿಕ್ಷಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಶ್ರೀ ನಿಧಿ ಸಂಜೀವಿನಿ ಒಕ್ಕೂಟದ ವ್ಯಾಪ್ತಿಯಡಿ ಬರುವ ಸ್ವಸಹಾಯ ಸಂಘಗಳ ಸದಸ್ಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…