ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು.
ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ ಜವಬ್ದಾರಿಯನ್ನು ಗುತ್ತಿಗೆದಾರರಿಗೆ ಈ ಸಂದರ್ಭದಲ್ಲಿ ನೆನಪಿಸಿದರು.ನೆರೆ ನೀರು ನಿಲ್ಲುವ ಗುಂಡಿಯಾದ ಸ್ಥಳದಲ್ಲಿ ಪೋಲೀಸ್ ಠಾಣೆಯ ನಿರ್ಮಾಣವಾಗಿದ್ದರಿಂದ ಆಧುನಿಕ ತಂತ್ರಜ್ಞಾನದ
ಹೆಚ್ಚವರಿ ರಿಟೈಂನಿಂಗ್ ವಾಲ್ ನಿರ್ಮಾಣದ ವಿಚಾರವನ್ನು ಗುತ್ತಿಗೆದಾರರ ಗಮನಕ್ಕೆ ತಂದಿದ್ದು, ಈ ನಿಟ್ಟಿನಲ್ಲಿ ಕೆಲವೊಂದು ಸಲಹೆ,ಸೂಚನೆಗಳನ್ನು ನೀಡಿದರು. ಕಟ್ಟಡದ ನಿರ್ಮಾಣದ ವೇಳೆ ಉತ್ತಮ ಗುಣಮಟ್ಟದ ಮೂಲಭೂತವಾದ ವಸ್ತುಗಳನ್ನು ಬಳಸಿ ಎಂದು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು
ಈ ಸಂದರ್ಭದಲ್ಲಿ ಅಡಿಸನಲ್ ಎಸ್.ಪಿ.ಜಗದೀಶ್, ಬಂಟ್ವಾಳ ಡಿವೈ.ಎಸ್.ಪಿ.ವಿಜಯಪ್ರಸಾದ್, ಬಂಟ್ವಾಳ ನಗರ ಪೋಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ, ಟ್ರಾಫಿಕ್ ಎಸ್.ಐ.ಸುತೇಶ್, ಪಿಎಚ್.ಸಿ.ಕ್ವಾಲಿಟಿ & ಕಂಟ್ರೋಲ್ ಇಂಜಿನಿಯರ್ ಶಿವಪ್ರಸಾದ್,ಎಕ್ಸ್ ಕ್ಯೂಟಿವ್ ಇಂಜಿನಿಯರ್ ಸಣ್ಣೇಗೌಡ, ಎ.ಇ.ಇ.ರಾಜೇಶ್, ಮತ್ತಿತರರು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…