ಮಂಗಳೂರಿನ ಕುಲಶೇಖರದಲ್ಲಿರುವ ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ ನುಡಿಸುವುದಕ್ಕೆ ನೆರವಾಗುವ ಸಂಪುಟ 2′ ರ ನೂತನ ಕೃತಿ ಕಳೆದ ವಾರ ಮಂಗಳೂರಿನಲ್ಲಿ ಲೋಕಾರ್ಪಣಗೊಂಡಿತು.
ಉದ್ಯಮಿ, ಸಮಾಜಸೇವಕಿ, ಮಾನವ ಹಕ್ಕುಗಳ ಹೋರಾಟಗಾರ್ತಿ ಶ್ರೀಮತಿ ಬೆನೆಟ್ ನವಿತಾ ಕ್ರಾಸ್ತ ಅವರು ಕೃತಿ ಬಿಡುಗಡೆಗೊಳಿಸಿ ಮಾತನಾಡಿ, “ಸಂಗೀತ ಶಿಕ್ಷಕ ಹಾಗು ರಂಗ ಕಲಾವಿದ ವಿಜಯ್ ನೊರೊನ್ಹ ಅವರ ಹಲವು ದಶಕಗಳ ಅಧ್ಯಾಪನದ ಅನುಭವ ಮತ್ತು ವಾದನರಂಗದ ಪರಿಶ್ರಮ ಪಾಂಡಿತ್ಯಗಳು ಈ ಕೃತಿಯ ಪ್ರತಿ ಪುಟವನ್ನೂ ಸಮೃದ್ಧಗೊಳಿಸಿವೆ; ಸಂಗೀತ ಕಲಿಕಾರ್ಥಿಗಳ ಕೈಬೆರಳು ಹಿಡಿದು ಮುನ್ನಡೆಸುವ ಸ್ಪಷ್ಟ ಸೂಚನೆಗಳು ಮತ್ತು ಉತ್ತಮ ಮಾರ್ಗದರ್ಶನ ವನ್ನು ಕೃತಿಯು ಒದಗಿಸುತ್ತದೆ” ಎಂದು ಶ್ಲಾಘಿಸಿದರು.
ಮುಖ್ಯ ಅತಿಥಿಯಾಗಿದ್ದ ಸಂಗೀತಗಾರ ಹಾಗೂ ಶಾಲೋಮ್ ರೆಕಾರ್ಡಿಂಗ್ ಸ್ಟುಡಿಯೋ ಮಾಲಿಕರಾದ ಡಿಜೆ ರಾಕೇಶ್ ಜೋಸೆಫ್ ಡಿಸೋಜ ಅವರು ” ಸ್ವೀಟ್ ಸಿಂಫನಿ ಸಂಸ್ಥೆಯ ಮಾಲಕರೂ ಉತ್ತಮ ಸಂಗೀತಗಾರರೂ ಆಗಿರುವ ಕೃತಿಕಾರ ವಿಜಯ್ ನೊರೊನ್ಹ ಅವರು ಎಲ್ಲ ಹಂತದ ಸಂಗೀತಾರ್ಥಿಗಳು ತಮ್ಮ ಮೆಚ್ಚಿನ ರಾಗಗಳಲ್ಲಿ ಪ್ರಭುತ್ವ ಸಾಧಿಸಲು ಅವಶ್ಯವಿರುವ ಕೌಶಲ್ಯ ಮತ್ತು ತಂತ್ರಗಳನ್ನು ಈ ಕೃತಿಯಲ್ಲಿ ವಿನ್ಯಾಸಗೊಳಿಸಿದ್ದಾರೆ. ಸಾರ್ವಕಾಲಿಕ ಜನಪ್ರಿಯತೆಯ ಮಧುರ ಗೀತೆಗಳಿಂದ ಸಮಕಾಲೀನ ಸೂಪರ್ ಹಿಟ್ ಗೀತೆಗಳವರೆಗೆ, ಬೇರೆ ಬೇರೆ ತಲೆಮಾರಿನ, ಬೇರೆ ಬೇರೆ ಭಾಷೆಯ ವೈವಿಧ್ಯಮಯ ಹಾಡುಗಳ ಪಾಶ್ಚಿಮಾತ್ಯ ನೊಟೇಶನ್ ಗಳನ್ನು ಒದಗಿಸುವ ಮೂಲಕ ಉದಯೋನ್ಮುಖ ಸಂಗೀತಗಾರರಿಗೆ ಈ ಕ್ರತಿಯು ಬಹು ಉಪಯುಕ್ತವಾಗಿದೆ” ಎಂದರು.
ಶ್ರೀ ಜಯರಾಜ್ ರೇಗೊ ಅತಿಥಿಗಳನ್ನು ಸ್ವಾಗತಿಸಿ, ಕೃತಿಯನ್ನು ಪರಿಚಯಿಸಿದರು.
ಸ್ವೀಟ್ ಸಿಂಫನಿ ಸಂಸ್ಥೆಯ ಮಾಲಕರಾದ ವಿಜಯ್ ನೊರೊನ್ಹರವರು ಎಲ್ಲರಿಗೂ ಧನ್ಯವಾದ ಅರ್ಪಿಸಿದರು.
ತಿರುವೈಲು ಗುತ್ತುವಿನ 'ದೂಜ' ಹೆಸರಿನ ಕಂಬಳ ಕೋಣ ಶಾಂಭವಿ ನದಿಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಹಲವಾರು ಬಹುಮಾನಗಳನ್ನು…
ಬೆಳ್ತಂಗಡಿ ತಾಲೂಕಿನಲ್ಲಿ ಸೋಮವಾರ ಸಂಜೆ, ಗುಡುಗು, ಸಿಡಿಲು ಸಹಿತ ಬಾರೀ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಉಜಿರೆಯ ಸಮೀಪ…
ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ ಮಂಗಳೂರಿನ ಫಾದರ್ ಮುಲ್ಲರ್…
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…
ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…
ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…