ಇತರೆ

ಉಡುಪಿ: ಎ.9ರಿಂದ ಎ.18ರ ವರೆಗೆ ಶೀರೂರು ಮೂಲ ಮಠದಲ್ಲಿ ಶ್ರೀ ರಾಮ ನವಮಿ ಮಹೋತ್ಸವ

ಉಡುಪಿ: ಶೀರೂರು ಮೂಲ ಮಠದ ಆಶ್ರಯದಲ್ಲಿ ಶೀರೂರು ಮಠಾಧೀಶರಾದ ವೇದವರ್ಧನತೀರ್ಥ ಶ್ರೀಪಾದರ ನೇತೃತ್ವದಲ್ಲಿ ಶ್ರೀ ರಾಮ ನವಮಿ ಮಹೋತ್ಸವ ಇದೇ ಬರುವ ಎ.9ರಿಂದ ಎ.18ರ ವರೆಗೆ ಹರಿಖಂಡಿಗೆಯ ಶೀರೂರು ಮೂಲ ಮಠದಲ್ಲಿ ನಡೆಯಲಿದೆ ಎಂದು ಶೀರೂರು ಮಠದ ದಿವಾನರಾದ ಡಾ. ಎಂ.ಉದಯ ಕುಮಾರ್ ಸರಳತ್ತಾಯ ತಿಳಿಸಿದರು.


ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಸುಮಾರು 70 ವರ್ಷಗಳ ಹಿಂದೆ ಶೀರೂರು ಮಠಾಧೀಶರಾಗಿದ್ದ ಲಕ್ಷ್ಮೀಂದ್ರತೀರ್ಥ ಶ್ರೀಪಾದರು ಆರಂಭಿಸಿದ್ದ ಶ್ರೀರಾಮ ನವಮಿ ರಥೋತ್ಸವದ ಸವಿನೆನಪಿಗಾಗಿ ಈ ಮಹೋತ್ಸವವನ್ನು ಆಯೋಜಿಸಲಾಗಿದೆ ಎಂದರು.
ಎ.11ರ ಸಂಜೆ 4ಕ್ಕೆೆ ಶ್ರೀ ಚಿತ್ರಾಪುರ ಮಠದ ವಿದ್ಯೇಂದ್ರ ಶ್ರೀಪಾದರು, ಎ. 13ಕ್ಕೆೆ ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಶ್ರೀಪಾದರು, 14ರಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ 17ರಂದು ನಡೆಯುವ ರಥೋತ್ಸವದಲ್ಲಿ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಶ್ರೀಪಾದರು ಭಾಗವಹಿಸಲಿದ್ದಾರೆ.
ಎ.10ರಿಂದ 18ರ ವರೆಗೆ ಹಯಗ್ರೀವ ಮಂತ್ರ ಹೋಮ, ಶಾಕಲ ಋಕ್ ಸಂಹಿತಾಯಾಗ, ಘೋಷ್ಠಿಪಾರಾಯಣ, ಲಕ್ಷ್ಮೀಶೋಭಾನೆ ಗಾಯನ ಜರುಗಲಿದ್ದು, ಎ.13ರಂದು ಭೂತರಾಜರ ಪೂಜೆ, ಎ.17ರಂದು ಅನ್ನಸಂತರ್ಪಣೆ ನಡೆಯಲಿದೆ. ಎ.18ರಂದು ಬೆಳಿಗ್ಗೆೆ 9ಕ್ಕೆೆ ಹಗಲು ರಥೋತ್ಸವ, ಅವಭೃತ ಸ್ನಾನ ಹಾಗೂ ರಾತ್ರಿ 9ಕ್ಕೆೆ ಬೊಬ್ಬರ್ಯ ನೇಮ ನೆರವೇರಲಿದೆ ಎಂದು ಅವರು‌ ತಿಳಿಸಿದರು.
ಎ.9ರಂದು ಕುಣಿತ ಭಜನೆ ಮತ್ತು ಭಕ್ತಿರಸಮಂಜರಿ, ಎ.10ರಂದು ಕುಂಜಾರುಗಿರಿ ಬಳಗದಿಂದ ಛತ್ರಪತಿ ಶಿವಾಜಿ ಐತಿಹಾಸಿಕ ನಾಟಕ, ಎ.11ರಂದು ಶ್ರೀಗಂಗಾ ಶಶಿಧರನ್ ಅವರ ವಯಲಿನ್ ವಾದನ, ಎ.12ರಂದು ಮಾರ್ಪಳ್ಳಿ ಚಂಡೆ ಬಳಗದವರಿಂದ ಊರ ಪರ್ಬ ನಾಟಕ, ಎ.13ರಂದು ಸುಧೀರ್ ಕೊಡವೂರು ಅವರ ತಂಡದಿಂದ ಶ್ರೀನರಸಿಂಹ ನೃತ್ಯ ರೂಪಕ, ಎ.14ರಂದು ಕುದ್ರೋಳಿ ಗಣೇಶ್ ಅವರಿಂದ ಮ್ಯಾಾಜಿಕ್ ಶೋ, ಎ.15ರಂದು ಮೈಸೂರು ರಾಮಚಂದ್ರ ಆಚಾರ್ಯ ಅವರಿಂದ ಭಕ್ತಿಿ ಸಂಗೀತ, ಎ.16ರಂದು ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರಿಂದ ಹಿಂದುಸ್ಥಾನಿ ಗಾಯನ, ಎ.17ರಂದು ಸಾಯಿ ವಿಘ್ನೇಶ್ ಅವರಿಂದ ಸಂಗೀತ, ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಪ್ರತೀ ದಿನ ಸಂಜೆ ಭಕ್ತರಿಗೆ ಫಲಹಾರದ ವ್ಯವಸ್ಥೆೆ ಮತ್ತು ಭಕ್ತರ ಅನುಕೂಲಕ್ಕಾಗಿ ಸಂಜೆ 5.30ರಿಂದ ರಾತ್ರಿ 9ರವರೆಗೆ ಶೀರೂರಿನಿಂದ ಉಡುಪಿ ತನಕ ಬಸ್ ವ್ಯವಸ್ಥೆೆ ಕಲ್ಪಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮ್ಯಾನೇಜರ್ ವಾಸುದೇವ ಆಚಾರ್ಯ, ಶೀರೂರು ಕೆಳಮಠದ ವಾಮನಮೂರ್ತಿ, ಪ್ರಮುಖರಾದ ಶ್ರೀಶ ಭಟ್ ಕಡೆಕಾರ್, ಅಶ್ವಥ್ ಭಾರಧ್ವಜ್ ಇದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

1 week ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

1 week ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

1 week ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

1 week ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

1 week ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

1 week ago