ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ…. ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ ಹಿಡಿಯುತ್ತದೆ. ಇನ್ಮುಂದೆ ಸಾರಿಗೆ ನಿಯಮಗಳನ್ನು ಮೀರಿ ಚಾಲನೆ ಮಾಡಿ ಸಿಕ್ಕಿಬಿದ್ದರೆ, ಏನಿದ್ದರೂ ದಂಡ ನೀಡಿ ತೆಪ್ಪಗೆ ಬರುವುದು ಸರಿ…
ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯ ದಂಡ ವಸೂಲಿ ಮಾಡುವ ಅಧಿಕಾರಿಗಳಿಗೆ ಎಂಬಂತೆ ನಾಲ್ಕು ಶರೀರದ ಮೇಲೆ ಅಳವಡಿಸುವ (Body Worn Camara) ಕ್ಯಾಮರಾ ಇಲಾಖೆ ನೀಡಿದ್ದು, ಇದೀಗ ಪೋಲೀಸರ ಮೇಲೆ ಕಣ್ಗಾವಲು ವ್ಯವಸ್ಥೆ ಕಲ್ಪಿಸಲಾಗಿದೆ.
ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಅನಾವಶ್ಯಕವಾದ ವಾದವಿವಾದಗಳನ್ನು ತಡೆದು ನ್ಯಾಯಪರವಾಗಿ ಕಾರ್ಯನಿರ್ವಹಿಸಲು ಇಲಾಖೆ ಒಂದು ಉತ್ತಮ ವ್ಯವಸ್ಥೆ ಮಾಡಿದೆ.
ರಸ್ತೆಯಲ್ಲಿ ನಡೆಯುವ ಅನೇಕ ವಿಚಾರಗಳಿಗೆ ಈ ಕ್ಯಾಮರಾ ಉಪಯೋಗವಾಗಲಿದ್ದು,ಕನಿಷ್ಠ 24 ಗಂಟೆಯವರೆಗೆ ಇದು ಕಾರ್ಯಚರಿಸುತ್ತದೆ.
ಉತ್ತಮ ಗುಣಮಟ್ಟದ ಕ್ಯಾಮರಾ ಇದಾಗಿದೆ .
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…