ನೆಲ್ಯಾಡಿ:ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ತಾತ್ಕಾಲಿಕವಾಗಿ ನಿಲ್ಲಿಸಿದ್ದ ಸೈನ್ ಬೋರ್ಡ್ಗಳನ್ನು ಕಳ್ಳತನ ಮಾಡಿ ಪಿಕಪ್ ವಾಹನವೊಂದಕ್ಕೆ ತುಂಬಿಸಿ ಸಾಗಾಟ ಮಾಡಲು ಮುಂದಾಗಿದ್ದ ಮೂವರು ಆರೋಪಿಗಳನ್ನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಂಸ್ಥೆಯ ಸಿಬ್ಬಂದಿಯೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ನಡೆದಿದೆ.
ಆಲೂರು ಹೊಸಹಳ್ಳಿಯ ಪುಟ್ಟಸ್ವಾಮಿ ಎಂಬವರ ಪುತ್ರ ಜ್ಯೋತಿಷ್(25ವ.), ನಿಂಗರಾಜು ಎಂಬವರ ಪುತ್ರ ಮೋಹನ್ಕುಮಾರ್(23ವ.)ಹಾಗೂ ಆಲೂರು ತೊರಗರವಳ್ಳಿ ನಿವಾಸಿ ಪಾಪಯ್ಯ ಎಂಬವರ ಪುತ್ರ ಗಣೇಶ (23ವ.) ಕಳವಿಗೆ ಯತ್ನಿಸಿದ ಆರೋಪಿಗಳಾಗಿದ್ದಾರೆ. ಇವರು ಎ.4ರಂದು ರಾತ್ರಿ 8 ಗಂಟೆಗೆ ಅಡ್ಡಹೊಳೆಯಲ್ಲಿ ರಸ್ತೆ ಬದಿಯಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಿದ್ದ 3 ಸೈನ್ ಬೋರ್ಡ್ಗಳನ್ನು ಕಳವುಗೈದು ಮಹೀಂದ್ರ ಪಿಕ್ಅಪ್ (ಕೆಎ02 ಎಸಿ 9426)ವಾಹನಕ್ಕೆ ಲೋಡ್ ಮಾಡುತ್ತಿದ್ದ ವೇಳೆ ರೌಂಡ್ಸ್ನಲ್ಲಿದ್ದ ಪೆರಿಯಶಾಂತಿ-ಅಡ್ಡಹೊಳೆ ನಡುವಿನ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಿರ್ವಹಿಸುತ್ತಿರುವ ಎಸ್.ಎಂ ಔತಾಡ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಅಡ್ಮಿನ್ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ನಿವಾಸಿ ಸಂಗಮ್ನಾಥ್ ಹಾಗೂ ಸಿಬ್ಬಂದಿ ಸಂಚಿತ್ ಪವಾರ್ ಅವರಿಗೆ ಸಿಕ್ಕಿಬಿದ್ದಿದ್ದಾರೆ. ಬಳಿಕ ಮೂವರು ಆರೋಪಿಗಳನ್ನು ಅವರ ವಾಹನ ಹಾಗೂ ಕಳವು ಮಾಡಿದ 3 ಸೈನ್ ಬೋರ್ಡ್ಗಳನ್ನು ಔತಾಡ್ ಸಂಸ್ಥೆಯ ಸಿಬ್ಬಂದಿಗಳು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ. ಕಳವಿಗೆ ಯತ್ನಿಸಿದ್ದ 3 ಸೈನ್ ಬೋರ್ಡ್ಗಳ ಮೌಲ್ಯ 9ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಉಪ್ಪಿನಂಗಡಿ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…