ನೆಲ್ಯಾಡಿ:ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ತಾತ್ಕಾಲಿಕವಾಗಿ ನಿಲ್ಲಿಸಿದ್ದ ಸೈನ್ ಬೋರ್ಡ್ಗಳನ್ನು ಕಳ್ಳತನ ಮಾಡಿ ಪಿಕಪ್ ವಾಹನವೊಂದಕ್ಕೆ ತುಂಬಿಸಿ ಸಾಗಾಟ ಮಾಡಲು ಮುಂದಾಗಿದ್ದ ಮೂವರು ಆರೋಪಿಗಳನ್ನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಂಸ್ಥೆಯ ಸಿಬ್ಬಂದಿಯೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ನಡೆದಿದೆ.
ಆಲೂರು ಹೊಸಹಳ್ಳಿಯ ಪುಟ್ಟಸ್ವಾಮಿ ಎಂಬವರ ಪುತ್ರ ಜ್ಯೋತಿಷ್(25ವ.), ನಿಂಗರಾಜು ಎಂಬವರ ಪುತ್ರ ಮೋಹನ್ಕುಮಾರ್(23ವ.)ಹಾಗೂ ಆಲೂರು ತೊರಗರವಳ್ಳಿ ನಿವಾಸಿ ಪಾಪಯ್ಯ ಎಂಬವರ ಪುತ್ರ ಗಣೇಶ (23ವ.) ಕಳವಿಗೆ ಯತ್ನಿಸಿದ ಆರೋಪಿಗಳಾಗಿದ್ದಾರೆ. ಇವರು ಎ.4ರಂದು ರಾತ್ರಿ 8 ಗಂಟೆಗೆ ಅಡ್ಡಹೊಳೆಯಲ್ಲಿ ರಸ್ತೆ ಬದಿಯಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಿದ್ದ 3 ಸೈನ್ ಬೋರ್ಡ್ಗಳನ್ನು ಕಳವುಗೈದು ಮಹೀಂದ್ರ ಪಿಕ್ಅಪ್ (ಕೆಎ02 ಎಸಿ 9426)ವಾಹನಕ್ಕೆ ಲೋಡ್ ಮಾಡುತ್ತಿದ್ದ ವೇಳೆ ರೌಂಡ್ಸ್ನಲ್ಲಿದ್ದ ಪೆರಿಯಶಾಂತಿ-ಅಡ್ಡಹೊಳೆ ನಡುವಿನ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಿರ್ವಹಿಸುತ್ತಿರುವ ಎಸ್.ಎಂ ಔತಾಡ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಅಡ್ಮಿನ್ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ನಿವಾಸಿ ಸಂಗಮ್ನಾಥ್ ಹಾಗೂ ಸಿಬ್ಬಂದಿ ಸಂಚಿತ್ ಪವಾರ್ ಅವರಿಗೆ ಸಿಕ್ಕಿಬಿದ್ದಿದ್ದಾರೆ. ಬಳಿಕ ಮೂವರು ಆರೋಪಿಗಳನ್ನು ಅವರ ವಾಹನ ಹಾಗೂ ಕಳವು ಮಾಡಿದ 3 ಸೈನ್ ಬೋರ್ಡ್ಗಳನ್ನು ಔತಾಡ್ ಸಂಸ್ಥೆಯ ಸಿಬ್ಬಂದಿಗಳು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ. ಕಳವಿಗೆ ಯತ್ನಿಸಿದ್ದ 3 ಸೈನ್ ಬೋರ್ಡ್ಗಳ ಮೌಲ್ಯ 9ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಉಪ್ಪಿನಂಗಡಿ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…