ನೆಲ್ಯಾಡಿ:ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ತಾತ್ಕಾಲಿಕವಾಗಿ ನಿಲ್ಲಿಸಿದ್ದ ಸೈನ್ ಬೋರ್ಡ್ಗಳನ್ನು ಕಳ್ಳತನ ಮಾಡಿ ಪಿಕಪ್ ವಾಹನವೊಂದಕ್ಕೆ ತುಂಬಿಸಿ ಸಾಗಾಟ ಮಾಡಲು ಮುಂದಾಗಿದ್ದ ಮೂವರು ಆರೋಪಿಗಳನ್ನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಂಸ್ಥೆಯ ಸಿಬ್ಬಂದಿಯೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ನಡೆದಿದೆ.
ಆಲೂರು ಹೊಸಹಳ್ಳಿಯ ಪುಟ್ಟಸ್ವಾಮಿ ಎಂಬವರ ಪುತ್ರ ಜ್ಯೋತಿಷ್(25ವ.), ನಿಂಗರಾಜು ಎಂಬವರ ಪುತ್ರ ಮೋಹನ್ಕುಮಾರ್(23ವ.)ಹಾಗೂ ಆಲೂರು ತೊರಗರವಳ್ಳಿ ನಿವಾಸಿ ಪಾಪಯ್ಯ ಎಂಬವರ ಪುತ್ರ ಗಣೇಶ (23ವ.) ಕಳವಿಗೆ ಯತ್ನಿಸಿದ ಆರೋಪಿಗಳಾಗಿದ್ದಾರೆ. ಇವರು ಎ.4ರಂದು ರಾತ್ರಿ 8 ಗಂಟೆಗೆ ಅಡ್ಡಹೊಳೆಯಲ್ಲಿ ರಸ್ತೆ ಬದಿಯಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಿದ್ದ 3 ಸೈನ್ ಬೋರ್ಡ್ಗಳನ್ನು ಕಳವುಗೈದು ಮಹೀಂದ್ರ ಪಿಕ್ಅಪ್ (ಕೆಎ02 ಎಸಿ 9426)ವಾಹನಕ್ಕೆ ಲೋಡ್ ಮಾಡುತ್ತಿದ್ದ ವೇಳೆ ರೌಂಡ್ಸ್ನಲ್ಲಿದ್ದ ಪೆರಿಯಶಾಂತಿ-ಅಡ್ಡಹೊಳೆ ನಡುವಿನ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಿರ್ವಹಿಸುತ್ತಿರುವ ಎಸ್.ಎಂ ಔತಾಡ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಅಡ್ಮಿನ್ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ನಿವಾಸಿ ಸಂಗಮ್ನಾಥ್ ಹಾಗೂ ಸಿಬ್ಬಂದಿ ಸಂಚಿತ್ ಪವಾರ್ ಅವರಿಗೆ ಸಿಕ್ಕಿಬಿದ್ದಿದ್ದಾರೆ. ಬಳಿಕ ಮೂವರು ಆರೋಪಿಗಳನ್ನು ಅವರ ವಾಹನ ಹಾಗೂ ಕಳವು ಮಾಡಿದ 3 ಸೈನ್ ಬೋರ್ಡ್ಗಳನ್ನು ಔತಾಡ್ ಸಂಸ್ಥೆಯ ಸಿಬ್ಬಂದಿಗಳು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ. ಕಳವಿಗೆ ಯತ್ನಿಸಿದ್ದ 3 ಸೈನ್ ಬೋರ್ಡ್ಗಳ ಮೌಲ್ಯ 9ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಉಪ್ಪಿನಂಗಡಿ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…