ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ.
ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ.
ಮನೆಯಿಂದ ಬಿಸಿರೋಡು ಕಡೆಗೆ ಸ್ಕೂಟರ್ ನಲ್ಲಿ ಸಹಸವಾರನಾಗಿ ಸಂಚಾರ ಮಾಡುತ್ತಿದ್ದ ವೇಳೆ ನರಿಕೊಂಬು ದಿಂಡಿಗೆ ಎಂಬಲ್ಲಿ ರಿಕ್ಷಾ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಘಟನೆಯಿಂದ ರಿಕ್ಷಾ ಚಾಲಕ ಸಜೀಪ ನಿವಾಸಿಗಳು ಜಾಬೀರ್ ಕೂಡ ಗಾಯಗೊಂಡಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪವನ್ ಬಿ.ಮೂಡ ಕಾಲೇಜಿನ ಪ್ರಥಮ ಪಿಯುಸಿ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದ. ರಜಾ ದಿನಗಳಲ್ಲಿ ಅಜ್ಜನ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…