ಉಡುಪಿ: ಒಬ್ಬ ಸಮರ್ಥ ನಾಯಕ ಯಾವುದೇ ಪಕ್ಷದಲ್ಲಿ ಇರಲಿ ಅವರಿಗೆ ಪ್ರಜ್ಞಾವಂತ ಸಮುದಾಯ ಬೆಂಬಲ ನೀಡುತ್ತದೆ ಎಂಬುದಕ್ಕೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಉತ್ತಮ ನಿದರ್ಶನ.
ಭಾನುವಾರ ಮೂಡಿಗೆರೆಯ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣಾ ಪ್ರಚಾರದ ಸಭೆಯಲ್ಲಿ ವಿಶ್ವಕರ್ಮ ಸಂಘದ ಅಧ್ಯಕ್ಷ ಜಗದೀಶ ಆಚಾರ್ಯ ಅವರು ತಮ್ಮ ಮೂಡಿಗೆರೆಯ ವಿಶ್ವಕರ್ಮ ಸಮುದಾಯವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಯಪ್ರಕಾಶ್ ಹೆಗ್ಡೆ ಅವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ.
ನಾಳೆಗಳ ನೆಮ್ಮದಿಗಾಗಿ, ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುವುದು ಜನಪ್ರತಿನಿಧಿಯ ಕರ್ತವ್ಯ. ತಾನು ಗೆದ್ದ ಕ್ಷೇತ್ರಕ್ಕೆ ಮತ್ತೆ ಬಾರದಿದ್ದರೆ ಆತ ಜನಪ್ರತಿನಿಧಿ ಎಂದೆನಿಸುವುದಿಲ್ಲ. ಸಂಸದನಾಗಿ ಅಲ್ಪ ಅವಧಿಯಲ್ಲಿ ಜನಪರ ಕಾರ್ಯಗಳನ್ನು ಮಾಡಿದ್ದ ಪರಿಣಾಮ ಇಂದು ನೀವೆಲ್ಲ ಪ್ರೀತಿ ತೋರಿಸಿದ್ದೀರಿ. ಅಭಿವೃದ್ಧಿಯ ಬಗ್ಗೆ, ಮಾಡಿದ ಕೆಲಸಗಳ ಬಗ್ಗೆ ಮಾತನಾಡುವುದಾದರೆ ನನ್ನಲ್ಲಿ ಸಮಯವಿದೆ, ಕೇವಲ ವೈಯಕ್ತಿಕ ಠೀಕೆಗಳಿಗೆ, ನವಿಲುಗರಿ ಮರಿ ಹಾಕುವ ಕತೆ ಹೇಳಲು ಸಮಯವಿಲ್ಲ ಎಂದರು.
ಮೂಡಿಗೆರೆಯ ವಿಶ್ವಕರ್ಮ ಸಮುದಾಯದ ಪ್ರಮುಖರು ಈ ಸಂದರ್ಭದಲ್ಲಿ ಹಾಜರಿದ್ದರು.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…