ಉಡುಪಿ: ಒಬ್ಬ ಸಮರ್ಥ ನಾಯಕ ಯಾವುದೇ ಪಕ್ಷದಲ್ಲಿ ಇರಲಿ ಅವರಿಗೆ ಪ್ರಜ್ಞಾವಂತ ಸಮುದಾಯ ಬೆಂಬಲ ನೀಡುತ್ತದೆ ಎಂಬುದಕ್ಕೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಉತ್ತಮ ನಿದರ್ಶನ.
ಭಾನುವಾರ ಮೂಡಿಗೆರೆಯ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣಾ ಪ್ರಚಾರದ ಸಭೆಯಲ್ಲಿ ವಿಶ್ವಕರ್ಮ ಸಂಘದ ಅಧ್ಯಕ್ಷ ಜಗದೀಶ ಆಚಾರ್ಯ ಅವರು ತಮ್ಮ ಮೂಡಿಗೆರೆಯ ವಿಶ್ವಕರ್ಮ ಸಮುದಾಯವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಯಪ್ರಕಾಶ್ ಹೆಗ್ಡೆ ಅವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ.
ನಾಳೆಗಳ ನೆಮ್ಮದಿಗಾಗಿ, ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುವುದು ಜನಪ್ರತಿನಿಧಿಯ ಕರ್ತವ್ಯ. ತಾನು ಗೆದ್ದ ಕ್ಷೇತ್ರಕ್ಕೆ ಮತ್ತೆ ಬಾರದಿದ್ದರೆ ಆತ ಜನಪ್ರತಿನಿಧಿ ಎಂದೆನಿಸುವುದಿಲ್ಲ. ಸಂಸದನಾಗಿ ಅಲ್ಪ ಅವಧಿಯಲ್ಲಿ ಜನಪರ ಕಾರ್ಯಗಳನ್ನು ಮಾಡಿದ್ದ ಪರಿಣಾಮ ಇಂದು ನೀವೆಲ್ಲ ಪ್ರೀತಿ ತೋರಿಸಿದ್ದೀರಿ. ಅಭಿವೃದ್ಧಿಯ ಬಗ್ಗೆ, ಮಾಡಿದ ಕೆಲಸಗಳ ಬಗ್ಗೆ ಮಾತನಾಡುವುದಾದರೆ ನನ್ನಲ್ಲಿ ಸಮಯವಿದೆ, ಕೇವಲ ವೈಯಕ್ತಿಕ ಠೀಕೆಗಳಿಗೆ, ನವಿಲುಗರಿ ಮರಿ ಹಾಕುವ ಕತೆ ಹೇಳಲು ಸಮಯವಿಲ್ಲ ಎಂದರು.
ಮೂಡಿಗೆರೆಯ ವಿಶ್ವಕರ್ಮ ಸಮುದಾಯದ ಪ್ರಮುಖರು ಈ ಸಂದರ್ಭದಲ್ಲಿ ಹಾಜರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…