ಕರಾವಳಿ

ಮಂಗಳೂರು ತ್ಯಾಜ್ಯ ದುರಂತ ಸಂತ್ರಸ್ತರಿಗಿಲ್ಲ ಇನ್ನೂ… ಪೂರ್ಣ ಪರಿಹಾರ, ಕೇವಲ ಮಾತಿನಿಂದಲೇ ಉಪಚಾರ, ಸಂತ್ರಸ್ತರಲ್ಲಿಲ್ಲ ಏಕತೆ, ಪರಿಹಾರಕ್ಕಿದೆ ನ್ಯೂನತೆ,

ದಕ್ಷಿಣ ಕನ್ನಡ : ಮಂಗಳೂರಿನ ಮಹಾನಗರ ಪಾಲಿಕೆ ತ್ಯಾಜ್ಯ ನಿರ್ವಹಣಾ ಘಟಕ ಪಚ್ಛನಾಡಿಯಲ್ಲಿ ತ್ಯಾಜ್ಯ ದುರಂತ ಸಂಭವಿಸಿ, ಮಂದಾರ ಎಂಬ ಕೃಷಿ ಪ್ರಧಾನ ಪ್ರದೇಶ, ಹಚ್ಚ ಹಸಿರಿನ ಸುಂದರ ತಾಣ, ಸಂಪೂರ್ಣ ನಾಶವಾಗಿ ಮಂದಾರ ಜನತೆಯ ಬದುಕನ್ನು ನಾಶ ಮಾಡಿ ಜನರ ನೆಮ್ಮದಿಯ ಬದುಕನ್ನ ಕಿತ್ತುಕೊಂಡ ತ್ಯಾಜ್ಯ ದುರಂತ ಸಂಭವಿಸಿ ಸುಮಾರು 5 ವರ್ಷಗಳು ಸಮೀಪಿಸುತ್ತಿವೆ, ಆದರೆ ಪೂರ್ಣ ಪ್ರಮಾಣದ ಪರಿಹಾರ ಮಾತ್ರ ಮರೀಚಿಕೆಯಾಗಿ ಉಳಿದಿದೆ.

ತ್ಯಾಜ್ಯ ದುರಂತದ ಸಂತ್ರಸ್ತರು ಪೂರ್ಣಪ್ರಮಾಣದ ಪರಿಹಾರಕ್ಕಾಗಿ ಅಲೆದು ಅಲೆದು ಸುಸ್ತಾಗಿದ್ದಾರೆ ವಿನಹ, ಯಾವುದೇ ಪ್ರಯೋಜನವಾಗಿಲ್ಲ, ಮಾನಸಿಕವಾಗಿ ನೊಂದ ಹಲವು ಸಂತ್ರಸ್ತರು ಈಗಾಗಲೇ ಮರಣ ಹೊಂದಿದ್ದಾರೆ, ಹಲವರು ಅನಾರೋಗ್ಯ ಪೀಡಿತರಾಗಿದ್ದಾರೆ, ಹಲವರು ಮಧ್ಯಂತರ ಪರಿಹಾರ ಪಡಕೊಂಡು, ಊರು ಬಿಟ್ಟು ಬೇರೆಡೆ ವಾಸವಾಗಿದ್ದಾರೆ ಆದರೆ ಸಂತ್ರಸ್ತರು ನೆಮ್ಮದಿಯಾಗಿಲ್ಲ ಎನ್ನುವುದು ವಾಸ್ತವ ಸತ್ಯ, ಕೆಲವೇ ಕೆಲವು ಮಂದಿ ಸಂಬಂಧ ಪಟ್ಟವರು ಸಂತ್ರಸ್ತ ನಿಲಯದಲ್ಲಿ ವಾಸವಾಗಿದ್ದಾರೆ, ಅಲ್ಲೂ ಮೂಲಭೂತ ಸೌಕರ್ಯಗಳಿಲ್ಲ ಎಂದು ವರದಿಯಾಗಿದೆ, ಯಾರನ್ನು ಹೇಳಿಯೂ ಪ್ರಯೋಜನವಿಲ್ಲ ಎನ್ನುತ್ತಾರೆ ಸಂತ್ರಸ್ತರು.

ಈ ಮಧ್ಯೆ ಸಂತ್ರಸ್ತರಲ್ಲಿ ಹಲವು ಮಂದಿ ನಮಗೆ ಪರಿಹಾರ ಬೇಕಾಗಿಲ್ಲ ನಮಗೆ ನಮ್ಮ ಜಾಗ ಮೊದಲಿನಂತೆ ಮಾಡಿ ನಮಗೆ ಹಿಂತಿರುಗಿಸಿ ಎಂದು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಲ್ಲಿ ವಿನಂತಿಸಿದ್ದಾರೆ ಎಂದು ಸಂತ್ರಸ್ತ ಮೂಲಗಳಿಂದ ಮಾಹಿತಿ ಇದೆ, ಹಲವು ಮಂದಿ ನಮಗೆ ಪೂರ್ಣ ಪರಿಹಾರ ಬೇಗ ಕೊಡಿ ಎನ್ನುತ್ತಿದ್ದಾರೆ, ಈ ಮಧ್ಯೆ ಅಧಿಕಾರಿಗಳು ಗೊಂದಲಕ್ಕೀಡಾದಂತೆ ತೋರುತ್ತಿದ್ದು ಇದುವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಂತೆ ತೋರುತ್ತಿಲ್ಲ, ಸುಮಾರು ಮೂರು ವರ್ಷಗಳ ಹಿಂದೆ ಭೂಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಿ ಮಾಧ್ಯಮ ಪ್ರಕಟಣೆಯನ್ನು ಇಲಾಖೆ ನೀಡಿತು, ನಂತರದಲ್ಲಿ ಯಾವುದೇ ಬೆಳವಣಿಗೆ ಕಂಡಿಲ್ಲ, ಪ್ರಸ್ತುತ ಪ್ರಕಟಣೆ ಅವಧಿ ಮೀರಿದ್ದು, ಯಾವುದೇ ಪ್ರಕ್ರಿಯೆ ಮುಂದುವರಿಯದ ಕಾರಣ ಈಗ ಭೂಸ್ವಾಧೀನ ಪ್ರಕರಣಕ್ಕೆ ಸಂಬಂಧಿಸಿದ ಪ್ರಕಟಣೆಗೆ ಯಾವುದೇ ಮಾನ್ಯತೆ ಇಲ್ಲ ಎನ್ನುವ ಮಾಹಿತಿ ಎಲ್ಲೆಡೆ ಹರಿದಾಡುತ್ತಿದೆ .

ಈ ಮಧ್ಯೆ ಹಲವು ಸಂತ್ರಸ್ತರು ಪೂರ್ಣ ಪ್ರಮಾಣದ ಪರಿಹಾರ ಸಿಗದಿರುವುದರಿಂದ ಬೇಸತ್ತು, ನಮಗೆ ಪರಿಹಾರದ ಅಗತ್ಯವಿಲ್ಲ ನಮಗೆ ನಮ್ಮ ಭೂಮಿ ವಾಪಸು ನೀಡಿ ಎನ್ನುತ್ತಿದ್ದಾರೆ, ಇನ್ನು ಹಲವರು ನಮಗೆ ಪೂರ್ಣ ಪ್ರಮಾಣದ ಪರಿಹಾರ ಬೇಗ ಕೊಡಿ ಎನ್ನುತ್ತಿದ್ದಾರೆ, ಹಲವರು ಇನ್ನು ಹಲವು ಸಂತ್ರಸ್ತರು ಅಂದು ನೀಡಿದ ಮೌಕಿಕ ಭರವಸೆಯಂತೆ ಈಗ ವಾಸಿಸುತ್ತಿರುವ ವಸತಿ ಸಂಕೀರ್ಣ ಉಚಿತವಾಗಿ ನೀಡಿ ಎನ್ನುತ್ತಿದ್ದಾರೆ, ನಮ್ಮ ಧಾರ್ಮಿಕ ನಂಬಿಕೆಗಳು ತ್ಯಾಜ್ಯ ದುರಂತದಲ್ಲಿ ನಾಶವಾಗಿದ್ದು ಮರು ಸ್ಥಾಪಿಸಿ ಎಂದು ದಂಬಾಲು ಬಿದ್ದಿದ್ದಾರೆ, ಹಲವು ಸಂತ್ರಸ್ತರು ಯಾವುದೇ ಗೊಂದಲಕ್ಕೆ ಅವಕಾಶ ಕೊಡದೆ ಮೌನವಾಗಿದ್ದಾರೆ, ಹಲವು ಸಂತ್ರಸ್ತರು ಅನಾರೋಗ್ಯ ಪೀಡಿತರಾಗಿದ್ದಾರೆ, ಒಟ್ಟಾರೆಯಾಗಿ ಮಂದಾರ ತ್ಯಾಜ್ಯ ದುರಂತ ಸಂತ್ರಸ್ತರ ಸಮಸ್ಯೆ ಸದ್ಯಕ್ಕೆ ಬಗೆ ಹರಿಯುವಂತೆ ತೋರುತ್ತಿಲ್ಲ ಸಂತ್ರಸ್ತರಲ್ಲಿ ಒಗ್ಗಟ್ಟಿನ ಕೊರತೆ ಹಾಗೂ ಪರಸ್ಪರ ಅಪನಂಬಿಕೆ ಇದ್ದಂತೆ ತೋರುತ್ತಿದ್ದು, ಅಲ್ಲದೆ ದಿನ ಕಳೆದಂತೆ ಒಬ್ಬೊಬ್ಬರು ಒಂದೊಂದು ರೀತಿಯ ಬೇಡಿಕೆ ಇಡುತ್ತಿರುವುದು ಸಮಸ್ಯೆ ಹೆಚ್ಚಿಸಲು ಇನ್ನೊಂದು ಕಾರಣ ಎನ್ನಲಾಗಿದ್ದು, ಈ ಮಧ್ಯೆ ಹಲವರು ನಾವು ಕೂಡ ಸಂತ್ರಸ್ತರು ಎಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎನ್ನುವ ಮಾಹಿತಿ ಇದ್ದು ಈ ಬಗ್ಗೆ ಗಮನಹರಿಸಬೇಕಿದೆ .

ಒಟ್ಟಾರೆಯಾಗಿ ಮಂದಾರ ತ್ಯಾಜ್ಯ ದುರಂತ ಸಂತ್ರಸ್ತರಿಗೆ ನೆಮ್ಮದಿ ದೊರೆಯಲಿ, ಜೀವನ ಮೊದಲಿನಂತಾಗಲಿ, ಎನ್ನುವುದು ನಮ್ಮ ಆಶಯ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…

24 hours ago

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…

1 day ago

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…

1 day ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…

1 day ago

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಬಿ.ಸಿ.ರೋಡ್‌ನ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…

1 day ago

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…

2 days ago