ಜನ ಮನದ ನಾಡಿ ಮಿಡಿತ

Advertisement

ನಮ್ಮ ಮಣ್ಣಿನ ಮೂಲ ಸತ್ವದ ಫಲವೇ ಬಿಸು. ಪ್ರಕೃತಿ ಬಿಟ್ಟು ತುಳುನಾಡು ಇಲ್ಲ;ದುಗ್ಗಣ್ಣ ಸಾವಂತರು

ಮುಲ್ಕಿ: ನಮ್ಮ ಮಣ್ಣಿನ ಮೂಲ ಸತ್ವದ ಫಲವೇ ಬಿಸು. ಪ್ರಕೃತಿ ಬಿಟ್ಟು ತುಳುನಾಡು ಇಲ್ಲ. ಪ್ರಕೃತಿ ನಾಶವಾಗಿದ್ದರ ಫಲವೇ ಇಂದಿನ ಹವಾಮಾನ ವೈಪರೀತ್ಯ ಎಂದು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಹೇಳಿದರು.


ಸಸಿಹಿತ್ಲು ರಂಗ ಸುದರ್ಶನ ಅಶ್ರಯದಲ್ಲಿ ಆಯೋಜಿಸಲಾದ ಬಿಸುರಂಗ ಪರ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ಜನಾಂಗಕ್ಕೆ ಕರಾವಳಿಯ ತುಳುವರ ಹೊಸ ವರ್ಷ ವಿಷು ಹಬ್ಬದ ಮಹತ್ವವನ್ನು ತಿಳಿಸುವ ಕಾರ್ಯವಾಗಬೇಕು ಎಂದರು.


ಸಸಿಹಿತ್ಲು ಭಗವತಿ ದೇವಸ್ಥಾನದ ಅನುವಂಶಿಕ ಮೊತ್ತೇಸರ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಮ್ಮ ನೆಲದ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಎಳೆಯರಿಗೆ ತಿಳಿಸುವ ಕಾರ್ಯ ನಡೆಯಬೇಕು. ವೈಜ್ಞಾನಿಕ ಸತ್ವದ ಸಹಿತ ಆಚರಣೆಯ ಮಹತ್ವಗಳನ್ನು ತಿಳಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದರು. ಗುಜರಾತಿನ ಹೋಟೆಲ್ ಉದ್ಯಮಿ ಸುವಾಸಿನಿ ನಾಯ್ಕ್ ಬಿಸು ಕಣಿ ಇಟ್ಟು ಜಾನಪದೀಯವಾಗಿ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಕ ಸೇವೆಯಲ್ಲಿ ಐವತ್ತು ವರ್ಷ ಪೂರೈಸಿದ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ವಾಮನ ಇಡ್ಯ ಮತ್ತು ಸಾಧಕ ಭಾಸ್ಕರ ಸುವರ್ಣ ಸಸಿಹಿತ್ತು ರವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ಮಂಗಳೂರಿನ ಯೋಜಕ ಇಂಡಿಯದ ಆಡಳಿತ ನಿರ್ದೇಶಕ ಜಗದೀಶ ಬೋಳೂರು ಮತ್ತು ಹಳೆಯಂಗಡಿ ಪಿ.ಸಿ.ಎ. ಬ್ಯಾಂಕಿನ ಕಾರ್ಯನಿರ್ವಾಹಕ అధిಕಾరి ಹಿಮಕರ ಸುವರ್ಣ, ಬಜ್ಜೆ ವ್ಯವಸಾಯ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು , ಗ್ರೀಷ್ಮ ಕಟೀಲು ರಂಗ ಸುದರ್ಶನ ಸಂಸ್ಥೆಯ ನಿರ್ದೇಶಕ ಪರಮಾನಂದ ವಿ. ಸಾಲಿಯಾನ್ , ರಾಜೇಂದ್ರ ಕುಮಾರ್ ಎಕ್ಕಾರು,ಉಪನ್ಯಾಸಕ ಎಸ್.ಆರ್. ಪ್ರಭಾತ್, ಎಸ್.ಆರ್. ಪ್ರದೀಪ್, ಟಿವಿ ನಿರೂಪಕ ನವೀನ್ ಶೆಟ್ಟಿ ಎಡ್ಡೆ ಮಾರ್ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!